ಪಿಂಚಣಿದಾರರೇ ಸಮಸ್ಯೆ ಇದ್ದರೆ ಪರಿಹಾರ ಪಡೆಯಲು ದಿನಾಂಕ ಫಿಕ್ಸ್

 

ಪಿಂಚಣಿದಾರರೇ ನಿಮಗೆ ಪಿಂಚಣಿ ಸಮಸ್ಯೆಗೆ ಜುಲೈ 13 ರಂದು ಪರಿಹಾರ ಪಡೆಯಿರಿ.

ನಮ್ಮ ಜ‌ನ ವಾರ್ತೆ ಬಳ್ಳಾರಿ: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಜುಲೈ 13 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ.

ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಬರೆದು ಪತ್ರ ಮೂಲಕ ಜುಲೈ 10 ರೊಳಗೆ ಕಳುಹಿಸಬಹುದು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-2263047 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಲ್ಲದೇ ರಾಜ್ಯದ ಆಯಾ ಪಿಂಚಣಿದಾರರು ಕೂಡ ಆಯಾ ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕಚೇರಿಗೆ ಭೇಟಿ ನೀಡಬಹುದಾಗಿದೆ.

[t4b-ticker]

You May Also Like

More From Author

+ There are no comments

Add yours