ಚಿಕ್ಕಮಗಳೂರು: ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎಚ್ ಡಿ ತಮ್ಮಯ್ಯ ಅವರ ವಿರುದ್ಧ 7,500 ಮತಗಳ ಅಂತರದಲ್ಲಿ ಪರಾಜಯಗೊಂಡಿದ್ದಾರೆ.
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಸಿ.ಟಿ.ರವಿ ಸೋಲು ಬಿಜೆಪಿಗೆ ದೊಡ್ಡ ಹಿನ್ನಡೆಯಾದಂತಾಗಿದೆ. ಸೋಲಿನ ಕುರಿತು ಟ್ವೀಟ್ ಮಾಡಿರುವ ಸಿ.ಟಿ.ರವಿ, ಜನರ ತೀರ್ಪನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.
[t4b-ticker]
+ There are no comments
Add yours