ಪರಿಶಿಷ್ಟ ಪಂಗಡಕ್ಕೆ ನಾಲ್ಕು ಸಚಿವ ಸ್ಥಾನ ಮತ್ತು ಡಿಸಿಎಂ ಸ್ಥಾನಕ್ಕೆ ಒತ್ತಾಯ

 

ಪರಿಶಿಷ್ಟ ಪಂಗಡಕ್ಕೆ 4 ಸಚಿವ ಸ್ಥಾನ ಕೊಡಿ: ಸತೀಶ್ ಜಾರಕಿಹೊಳಿ ನೇತೃತ್ವದ ಪರಿಶಿಷ್ಟ ಪಂಗಡದ ಸಮುದಾಯದ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದೆ. ಎಸ್‌ಟಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮತ್ತೊಮ್ಮೆ ಆಗ್ರಹ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಸ್ಥಾನದ ಯಾವುದೇ ಭರವಸೆ ನೀಡದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈಗ ಯಾಕೆ ಕೊಡುತ್ತಿಲ್ಲ ಎಂದು ಕೇಳಲಾಗುತ್ತಿದೆ. ಈಗ ಹೆಚ್ಚಿನ ಜನರಿಗೆ ಸಚಿವ ಸ್ಥಾನ ನಿಡುವಂತೆ ಒತ್ತಡ ಹೇರಲಾಗುತ್ತಿದೆ. ಎಸ್‌ಟಿ ಸಮುದಾಯಕ್ಕೆ ಕನಿಷ್ಠ 3-4 ಸಚಿವ ಸ್ಥಾನ ನೀಡುವ ಬಗ್ಗೆ ಭರವಸೆ ನೀಡಲಾಗಿದೆ. ಈಗಾಗಲೇ ಸತೀಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದ್ದು, ಜಿಲ್ಲಾವಾರು ಪ್ರಾತಿನಿಧ್ಯ ಗಮನದಲ್ಲಿಟ್ಟುಕೊಂಡು ಎಸ್.ಟಿ ಸಮುದಾಯಕ್ಕೆ 3 ಸಚಿವ ಸ್ಥಾನ ನಿಡಬೇಕು. ಬಹುತೇಕ ಹೈದ್ರಾಬಾದ್ ಕರ್ನಾಟಕ ಭಾಗದ ಎಸ್.ಟಿ ಕ್ಷೇತ್ರಗಳಿಗೆ ಸಚಿವ ಸ್ಥಾನ ನೀಸುವಂತೆ ಮನವಿ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours