ಶಿವನನ್ನು ನಂಬಿದ ಭಕ್ತರಿಗೆ ಯಾವುದೆ ಕಂಟಕ ಎದುರಾಗದು :ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ:( challakere) ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾಶಿವರಾತ್ರಿ ಹಬ್ಬವನ್ನು ಶಿವಪೂಜೆ, ಹೋಮ ಮತ್ತು ಪ್ರಸಾದ ವಿತರಣೆ ಮೂಲಕ ಭಕ್ತರು ಭಕ್ತಿಶ್ರದ್ದೆಯಿಂದ ಆಚರಿಸಿದರು. ನಗರದ ಬಹುತೇಕ ದೇವಸ್ಥಾನಗಳಲ್ಲಿ ಶಿವನನ್ನು ಆರಾಧಿಸುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು. ಎಲ್ಲಾ ದೇವಸ್ಥಾನಗಳಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಶಿವನಾಮಸ್ಮರಣೆಯೊಂದಿಗೆ ಶಿವನ ದರ್ಶನ ಪಡೆದರು.
ತಾಲ್ಲೂಕಿನ ದೊಡ್ಡೇರಿ ಗ್ರಾಮದ ಶ್ರೀಕನ್ನೇಶ್ವರ ಆಶ್ರಮದ ಶ್ರೀಮಲ್ಲಪ್ಪಸ್ವಾಮೀಜಿಯವರು ವಿಶೇಷವಾಗಿ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಗುರುಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ಸನ್ಮಾನಿಸಿದರು. ಕಳೆದ ಹಲವಾರು ವರ್ಷಗಳಿಂದ ಶ್ರೀಮಲ್ಲಪ್ಪಸ್ವಾಮೀಜಿಯವರ ನೇತೃತ್ವದಲ್ಲಿ ಎಲ್ಲಾ ಹಬ್ಬಗಳನ್ನು ಇಲ್ಲಿ ವೈಶಿಷ್ಟಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ರಾಜ್ಯದ ಮೂಲೆ, ಮೂಲೆಯಿಂದ ಶಿವಭಕ್ತರು ಆಗಮಿಸಿ ದೇವರ ದರ್ಶನ ಪಡೆದಿದ್ಧಾರೆ. ಭಕ್ತರ ಸಂಕಷ್ಟಗಳನ್ನು ನಿವಾರಿಸುವಂತೆ ಶಿವನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
[t4b-ticker]

You May Also Like

More From Author

+ There are no comments

Add yours