ಬಿಪಿಎಲ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ತಲಾ 5 ಕೆಜಿ, ಅಂತ್ಯೋದಯ ಪಡಿತರಚೀಟಿಗೆ ತಲಾ 35 ಕೆಜಿ ಅಕ್ಕಿ ವಿತರಣೆ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10:
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗತಿಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆಗೊಳಿಸಲಾಗಿದೆ.
ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours