ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.25:
ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಟ್ಯಾಬ್ ಮತ್ತು ಶಾಲಾ ಬ್ಯಾಗ್ ಕಿಟ್ ವಿತರಣೆ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಫಲಾನುಭವಿಯ 10ನೇ ತರಗತಿ ಓದುತ್ತಿರುವ ಮಕ್ಕಳಿಗೆ ಸಾಂಕೇತಿಕವಾಗಿ ಟ್ಯಾಬ್ ಮತ್ತು ಶಾಲಾ ಬ್ಯಾಗ್ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಾಜು, ಕಾರ್ಮಿಕ ನಿರೀಕ್ಷಕರಾದ ಡಿ.ರಾಜಣ್ಣ, ಗಿರಿತಿಮ್ಮಕ್ಕ, ಕುಸುಮ ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
[t4b-ticker]
+ There are no comments
Add yours