ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 16:
ಚಳ್ಳಕೆರೆ ತಾಲ್ಲೂಕಿನ ಘಟಪರ್ತಿ ಗ್ರಾಮದಲ್ಲಿ ಇದೇ ಜೂನ್ 18ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಹೂಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಜಿಲ್ಲಾಧಿಕಾರಿಗಳು ಭೇಟಿ ನೀಡುವ ತಾಲ್ಲೂಕು ಹೊರತು ಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜೂನ್ 18ರಂದು ಚಿತ್ರದುರ್ಗ ತಾಲ್ಲೂಕಿನ ಕಲ್ಲೇನಹಳ್ಳಿ, ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ, ಹೊಸದುರ್ಗ ತಾಲ್ಲೂಕಿನ ಕಬ್ಬಳ, ಹೊಳಲ್ಕೆರೆ ತಾಲ್ಲೂಕಿನ ವನಕೆ ಮರಡಿ ಕಾವಲ್, ಮೊಳಕಾಲ್ಮೂರು ತಾಲ್ಲೂಕಿನ ಬಾಂಡ್ರಾವಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
[t4b-ticker]
+ There are no comments
Add yours