ಡಾ.ಸೌಮ್ಯ ಮಂಜುನಾಥಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

 

chitradurga: ಡಾ. ಸೌಮ್ಯ ಮಂಜುನಾಥ ಸ್ವಾಮಿ,ಕೆ ಇವರು ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಪಿ.ಹೆಚ್.ಡಿ (PHD) ಪದವಿಯನ್ನು ಪಡೆದಿರುತ್ತಾರೆ. ಹಾಗೂ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ (ರಿ) ಎಂಬ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಸುಮಾರು 8 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ. ನೂರಾರು ರಸ್ತೆ ಸುರಕ್ಷಿತಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಜನರಲ್ಲಿ ರಸ್ತೆ ಸುರಕ್ಷತಾ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸಿ.ಪಿ.ಆರ್ ಪ್ರಥಮ ಚಿಕಿತ್ಸೆಯ ಬಗ್ಗೆ 5,000 ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳಿಸಿ ಹೃದಯಾಘಾತ ಸಂಭವಿಸಿದಾಗ ನೆರವಿಗೆ ದಾವಿಸುವಂತೆ ಪ್ರೇರೆಪಿಸಿದ್ದು, ಇನ್ನು ಮುಂತಾದ ಜೀವ ಉಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇವರು ರಸ್ತೆ ಸುರಕ್ಷತಾ ಸ್ವಯಂ ಸೇವಕಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಕಂಡು ಜಿಲ್ಲಾ ಪೊಲೀಸ್ ಇಲಾಖೆಯು ಪ್ರಮಾಣ ಪತ್ರದೊಂದಿಗೆ ಅಭಿನಂದಿಸಿದೆ.

ಇದನ್ನೂ ಓದಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ : 28 ಸಾಧಕರಿಗೆ ಸನ್ಮಾನ

ಆರ್.ಟಿ.ಓ ಇಲಾಖೆ ಗುರುತಿಸಿ ಸನ್ಮಾನಿಸಿದೆ. ಹಲವಾರು ಸಂಘ ಸಂಸ್ಥೆಗಳು ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದೆ. ಈಗ ಜಿಲ್ಲಾಡಳಿತ ಇವರ ಸೇವೆಯನ್ನು ಪರಿಗಣಿಸಿ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ.

ಇದನ್ನೂ ಓದಿ:ಚಿತ್ರದುರ್ಗದ ಇಬ್ಬರು ಅಧಿಕಾರಿಗಳ ಮೇಲೆ ಲೋಕಯುಕ್ತ ರೈಡ್

[t4b-ticker]

You May Also Like

More From Author

+ There are no comments

Add yours