ಚಿತ್ರದುರ್ಗ:ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಡಿಸೆಂಬರ್ 22 ರಂದು ಚಳ್ಳಕೆರೆಯಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾದರ್ಶನ (Janata Darshan)
ಡಿ. 27 ಕ್ಕೆ ಮುಂದೂಡಲಾಗಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಜಿಲ್ಲಾ ಮಟ್ಟದ ಜನತಾ ದರ್ಶನ ಇದೇ ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಕ್ಕೆ ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಇದನ್ನೂ ಓದಿ: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಎಲ್ಲಾ ಫೈನಲ್
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
[t4b-ticker]
+ There are no comments
Add yours