ನಾಯಕನಹಟ್ಟಿ ತಿಪ್ಪೇಸ್ವಾಮಿ ಆಶೀರ್ವಾದ ಪಡೆದ ನೂತನ ಡಿಸಿ ದಿವ್ಯಾ ಪ್ರಭು

 

 

 

 

ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿವ್ಯಾ ಪ್ರಭು ಅವರು ಕುಟುಂಬ ಸಮೇತ ಚಳ್ಳಕೆರೆ ತಾಲೂಕಿನ ಐತಿಹಾಸಿಕ ಶ್ರೀ ಕ್ಷೇತ್ರ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹೊರಮಠ ಮತ್ತು  ದೇವಸ್ಥಾನಕ್ಕೆ ಭೇಟಿ ನೀಡಿ  ನಾಯಕನಹಟ್ಟಿ ತಿಪ್ಪೇಶನ‌ ಆಶೀರ್ವಾದ ಪಡೆದರು. ನೂತನ ಜಿಲ್ಲಾಧಿಕಾರಿ ಅವರ ಜೊತೆ ಪತಿ ಐಎಎಸ್ ಅಧಿಕಾರಿ ರಾಮ್ ಪ್ರಸಾದ್ ಮನೋಹರ್  ಅವರು ಸಹ ಆಗಮಿಸಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ.

 

 

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಜನರ ಮನೆ ಬಾಗಿಲಿಗೆ  ಮುಟ್ಟಿಸುವ ಕೆಲಸ ಮಾಡಲಾಗುವುದು. ಹಿಂದುಳಿದ ಜನರು ಹೆಚ್ಚಿರುವ ಜಿಲ್ಲೆಯಾಗಿದ್ದು  ಬಡ ಜನರ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.  ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗದ  ಸಹಕಾರದಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.  ಇದೇ ಸಂದರ್ಭದಲ್ಲಿ  ನಾಯಕನಹಟ್ಟಿ  ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಫೋಟೋ ನೀಡಿ ಗೌರವ ಸಮರ್ಪಿಸಿದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಇದ್ದರು.

[t4b-ticker]

You May Also Like

More From Author

+ There are no comments

Add yours