ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಶತಾಯಗತಾಯ ಗೆಲ್ಲಬೇಕು ಎಂದು ಪಣ ತೊಟ್ಟಿರುವ ನಡುವೆಯೇ ಖರ್ಗೆ ಹೊಸ ಪ್ಲಾನ್ ಮಾಡಿದ್ದಾರೆ. ಬಿಜೆಪಿಯ ಜನಸಂಕಲ್ಪ ಯಾತ್ರೆ ಪೈಪೋಟಿಯಾಗಿ ಬಸ್ ಯಾತ್ರೆ ಮಾಡಲು ತಿರ್ಮಾನಿಸಿದ್ದು ಡಿಕೆಶಿ ಮತ್ತು ಸಿದ್ದು ಗೆ ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲು ಸಿದ್ದತೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯದ ಹಿನ್ನೆಲೆಯಲ್ಲಿ ಪ್ರತ್ಯೇಕ ಪ್ರವಾಸ ಬೇಡ ಎಂದು ಕೆಲ ಕೈ ನಾಯಕರು ಸಲಹೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತ್ಯೇಕ ಪ್ರವಾಸಕ್ಕೆ ಹೈಕಮಾಂಡ್ ಅನುಮತಿ ಸಿಕ್ಕಿದ್ದು,
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳನ್ನು ಪ್ರಚಾರ ಮಾಡಲು ಪ್ರತ್ಯೇಕ ಪ್ರವಾಸ ಅಗತ್ಯ ಎಂದು ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ಹೀಗಾಗಿ ಪ್ರತ್ಯೇಕ ಪ್ರವಾಸ ಕೈಗೊಳ್ಳಲು ಹೈಕಮಾಂಡ್ ಸೂಚಿಸಿದೆ. ಪ್ರತ್ಯೇಕ ಪ್ರವಾಸ ಮಾಡಿ, ಆದರೆ ಯಾವುದೇ ಗೊಂದಲ ಸೃಷ್ಟಿ ಮಾಡಬೇಡಿ, ತಾವೂ ಪ್ರವಾಸದಲ್ಲಿ ಭಾಗವಹಿಸುವುದಾಗಿ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಪೈಪೋಟಿಯಾಗಿ ರಾಜ್ಯ ಪ್ರವಾಸ ಮಾಡಲು ಈಗಾಗಲೇ ಹೊಸ ಬಸ್ ಗಳನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಂಡಗಳು ಸಿದ್ಧಗೊಳಿಸಿವೆ.
[t4b-ticker]
+ There are no comments
Add yours