ಕರ್ನಾಟಕ :ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ನಡೆಸಿದ ಚುನಾವಣಾ ಸಮೀಕ್ಷೆಗಳ ಫಲಿತಾಂಶವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಚುನಾವಣಾ ಸಮೀಕ್ಷೆಗಳ ಫಲಿತಾಂಶದ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಭಾರಿಸಲಿದೆ. ಆ ಮೂಲಕ, ಮುಂದಿನ ನಾಲ್ಕು ತಿಂಗಳಲ್ಲಿ ಕರ್ನಾಕದ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿಯಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
‘ಮುಂದಿನ ನಾಲ್ಕು ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 136 ಸ್ಥಾನಗಳು ಸಿಗಲಿವೆ. ಇದು ಕೆಪಿಸಿಸಿ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. ಬಿಜೆಪಿ ಕೇವಲ 66 ರಿಂದ 70 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಜೆಡಿಎಸ್ಗೆ ಎಷ್ಟು ಸ್ಥಾನ ದೊರೆಯಲಿವೆ ಎಂಬುದು ನನಗೆ ಸ್ಪಷ್ಟವಿಲ್ಲ’ ಎಂದು ತಿಳಿಸಿದ್ದಾರೆ.
[t4b-ticker]
+ There are no comments
Add yours