ಬೆಂಗಳೂರು : ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರಯವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ವಿಫಲರಾದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದರು ಮತ್ತು ಮಾಸ್ಕ್ ಧರಿಸದವರಿಗೆ ಸರ್ಕಾರಿ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಶಿಫಾರಸು ಮಾಡಿದರು.
ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಕೋವಿಡ್-ಸೂಕ್ತ ನಡವಳಿಕೆಯನ್ನು (ಸಿಎಬಿ) ಅನುಸರಿಸುವುದು ಮತ್ತು ಲಸಿಕೆ ವ್ಯಾಪ್ತಿಯನ್ನು ಸುಧಾರಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ಶಿಫಾರಸು ಮಾಡಲಾಗಿದೆ ಎಂದು ಟಿಎಸಿ ಸದಸ್ಯರೊಬ್ಬರು ಮಾಹಿತಿ ಹಂಚಿಕೊಡಿದ್ದಾರೆ.
[t4b-ticker]
+ There are no comments
Add yours