ಚಿತ್ರದುರ್ಗದಲ್ಲಿ ಜನವರಿ 8 ರಂದು ನಡೆಯಲಿರುವ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶದ ಲಾಂಛನವನ್ನು ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ಐಕ್ಯತಾ ಸಮಾವೇಶದ ಸಂಘಟನಾ ಸಮಿತಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾದ ಎಚ್.ಸಿ.ಮಹಾದೇವಪ್ಪ, ವೇದಿಕೆ ಸಮಿತಿಯ ಅಧ್ಯಕ್ಷರಾದ ಎಚ್.ಆಂಜನೇಯ, ಸಮನ್ವಯ ಸಮಿತಿ ಸಂಚಾಲಕರಾದ ಬಿ.ಎನ್.ಚಂದ್ರಪ್ಪ, ಶಾಸಕರಾದ ಟಿ.ರಘುಮೂರ್ತಿ, ರಾಜ್ಯಸಭಾ ಮಾಜಿ ಸದಸ್ಯರಾದ ಹನುಮಂತಪ್ಪ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ವಿಧಾನಪರಿಷತ್ತು ಮಾಜಿ ಸದಸ್ಯರಾದ ರಘುಆಚಾರ್, ಕಾಂಗ್ರೆಸ್ ಮುಖಂಡರಾದ ಹನುಮಲಿ ಷಣ್ಮುಖಪ್ಪ, ಬಿ.ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ಉಪಸ್ಥಿತರಿದ್ದರು.
[t4b-ticker]
+ There are no comments
Add yours