ಚಳ್ಳಕೆರೆ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಒತ್ತು: ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ: ಚಳ್ಳಕೆರೆ ತಾಲೂಕು ಕೃಷಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು   ಮುಂದಿನ ದಿನದಲ್ಲಿ ರೈತರು ತೋಟಗಾರಿಕೆ ಬೆಳೆಗೆ ಹೆಚ್ಚು ಒತ್ತು  ನೀಡುತ್ತಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದ ಜಿಲ್ಲಾಮಟ್ಟದ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲೆಗೆ ಭದ್ರ ನೀರಿನ ಕೆಲಸ ನಡೆಯುತ್ತಿದ್ದು  ಕಾಂಗ್ರೆಸ್ ಸರ್ಕಾರದಲ್ಲಿ  ಜಿಲ್ಲೆಗೆ ಸಾವಿರಾರು ಕೋಟಿಗಳ ಅಭಿವೃದ್ಧಿ ಕೆಲಸಗಳು ಆಗಿವೆ. ಚಳ್ಳಕೆರೆ ಮತ್ತು ಮೊಳಕಾಲ್ಮುರು  ಕ್ಷೇತ್ರಕ್ಕೆ  ಕುಡಿಯುವ ನೀರಿಗೆ  ಪ್ರತಿ ವರ್ಷ ಬೇಸಿಗೆಯಲ್ಲಿ  ತೊಂದರೆ ಆಗುತಿತ್ತು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ  ಎರಡು ಕ್ಷೇತ್ರದ ಜನರಿಗೆ  ಶಾಶ್ವತವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು, ಮಾಜಿ ಸಚಿವರಾದ ಎಚ್ ಆಂಜನೇಯ ರವರು, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ತಿಪ್ಪಣ್ಣ ಮರಿಕುಂಟೆ ರವರು, ಜಿಲ್ಲಾ ಕನ್ನಡ ಪರಿಷತ್ನ ಅಧ್ಯಕ್ಷರಾದ ಶಿವಸ್ವಾಮಿ ರವರು, ತಾಲೂಕ ಅಧ್ಯಕ್ಷರಾದ ಜಿ ಟಿ ವೀರಭದ್ರ ಸ್ವಾಮಿ ರವರು ಹಾಗೂ ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours