ಅಬಕಾರಿ ಡಿಸಿ ಸೇರಿ ಮೂವರು ಲೋಕಾಯುಕ್ತ ಬಲೆಗೆ

 

 

 

 

Davanagere: ಲಂಚ ಸ್ವೀಕರಿಸುವಾಗ ಅಬಕಾರಿ ಡಿಸಿ, ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಬಕಾರಿ ಡಿಸಿ ಸ್ವಪ್ನ, ತಮ್ಮ ಕಚೇರಿ ಸಿಬ್ಬಂದಿ ಮೂಲಕ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

 

 

ಇದನ್ನೂ ಓದಿ: ಎರಡು ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ

ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಆರೋಪಿಯು ಹರಿಹರದಲ್ಲಿರುವ ಅಮ್ಯೂಸ್ಮೆಂಟ್ ಪಾರ್ಕ್ಗೆ ಸಿಎಲ್-7 ಮದ್ಯದ ಪರವಾನಗಿ ನೀಡಲು ದೂರುದಾರ ಡಿಜಿ ರಘುನಾಥ ಅವರಿಂದ ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಮೊದಲಿಗೆ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ದೂರುದಾರರಿಂದ 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅಶೋಕ ಹೆಚ್ ಎಂರನ್ನು ಬಂಧಿಸಿದ್ದಾರೆ. ಬಳಿಕ ಸ್ವಪ್ನಾ, ಶೀಲಾ ಹಾಗೂ ಶೈಲಶ್ರೀ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

[t4b-ticker]

You May Also Like

More From Author

+ There are no comments

Add yours