ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.22:ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ರೇಣುಕಾ ದೇವಿ ಸೋಬಾನೆ ಕಲಾವಿದರ ಮಹಿಳಾ ಸಂಘದ ವತಿಯಿಂದ ಇದೇ ಡಿಸೆಂಬರ್ 24 ರಂದು ಬೆಳಿಗ್ಗೆ 11ಕ್ಕೆ ಚಿತ್ರುರ್ಗ ನಗರದ ಎಂ.ಕೆ ಹಟ್ಟಿಯ ದುರ್ಗಾಂಭಿಕಾ ದೇವಿ ದೇವಸ್ಥಾನದಲ್ಲಿ “ಜಾನಪದ ಉತ್ಸವ”(Folk festival)ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ನಾನು ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಲ್ಲ:ಎ.ನಾರಾಯಣಸ್ವಾಮಿ
ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚನ್ನಯ್ಯಸ್ವಾಮಿಜೀ ದಿವ್ಯಸಾನಿಧ್ಯ ವಹಿಸುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಎಂ.ಕೆ ಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಗಣೇಶ್ ಅಧ್ಯಕ್ಷತೆ ವಹಿಸುವರು. ಶ್ರೀ ರೇಣುಕಾ ದೇವಿ ಸೋಬಾನೆ ಕಲಾವಿದರ ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಮ್ಮ ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಚಿವ ಹೆಚ್.ಅಂಜನೇಯ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಜಗದೀಶ್, ಜಿಲ್ಲಾ ಪಂಚಾಯಿತ್ ಸದಸ್ಯ ನರಸಿಂಹರಾಜು, ಹಿರಿಯ ಚಲನಚಿತ್ರ ನಟ ಡೊಡ್ಡಣ್ಣ, ಬೆಂಗಳೂರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಾಹಿತಿ ಕಲಾವಿದರ ಮಾಸಾಶನ ಮಂಜೂರಾತಿ ಸಮಿತಿ ಸದಸ್ಯ ಡಿ.ಓ. ಮುರಾರ್ಜಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ ಮಲ್ಲಿಕಾರ್ಜುನ್, ಎಂ.ಕೆ ಹಟ್ಟಿ ಗ್ರಾ.ಪಂ. ಉಪಾಧ್ಯಕ್ಷೆ ರೇಷ್ಮಾಬಾನು ಅನ್ವರ್, ಪಿ.ಡಿ.ಓ ಸಂತೋಷಕುಮಾರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
[t4b-ticker]
+ There are no comments
Add yours