ಮೈಸೂರು: ‘ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಮನವಿ ಮಾಡಿದೆ.
ನಗರದಲ್ಲಿ ಬುಧವಾರ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಮಾತನಾಡಿ, ‘ಕಾಂಗ್ರೆಸ್ನಲ್ಲಿ ನಮ್ಮ ಸಮುದಾಯದ 15 ಶಾಸಕರು ಆಯ್ಕೆಯಾಗಿದ್ದಾರೆ.
ಶೇ 70ರಷ್ಟು ಮತ ಚಲಾವಣೆ ಮಾಡಿ ಪಕ್ಷ ಅಧಿಕಾರಕ್ಕೇರಲು ಸಹಕರಿಸಿದ್ದೇವೆ’ ಎಂದರು.
‘ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಯಾದ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮುದಾಯ ವಿಶ್ವಾಸವಿಟ್ಟಿದೆ. ಅವರನ್ನು ಉನ್ನತ ಸ್ಥಾನಕ್ಕೆ ಪರಿಗಣಿಸಲೇಬೇಕು’ ಎಂದು ಆಗ್ರಹಿಸಿದರು.
‘ಮೈಸೂರು ಭಾಗದಿಂದ ಆಯ್ಕೆಯಾದ ಸಮುದಾಯದ ಏಕೈಕ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಈ ಭಾಗದಿಂದ ಸಮುದಾಯದ ಒಬ್ಬರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆ ರಾಜ್ಯ ಉಪಾಧ್ಯಕ್ಷ ಎಸ್.ಸಿದ್ದಯ್ಯ, ಮುಖಂಡರಾದ ಮಂಜುನಾಥ್, ಜಿ.ಡಿ.ಪುಟ್ಟರಾಜು, ರೋಹಿತ್, ಮಹದೇವು ಇದ್ದರು.
[t4b-ticker]
+ There are no comments
Add yours