ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ03:
ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಮತ್ತು ಮುಖ್ಯ ವೈದ್ಯಾಧಿಕಾರಿಗಳು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಚಿತ್ರದುರ್ಗ ಹಾಗೂ ಐಮಂಗಲ ಹಾಗೂ ಮರಡಿಹಳ್ಳಿ ವ್ಯಾಪ್ತಿಯ ಆಸ್ಪತ್ರೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಹಕಾರದೊಂದಿಗೆ ಹಿರಿಯೂರು ತಾಲ್ಲೂಕು ತಾಳವಟ್ಟಿ ಗ್ರಾಮದಲ್ಲಿ ಆವುಲಪಾಟಿ ತಿಮಮ್ಪ್ಪ ಮತ್ತು ಆದಿಲಕ್ಷ್ಮಮ್ಮ ಮೆಮೋರಿಯಲ್ ಟ್ರಸ್ಟ್ನ ವತಿಯಿಂದ ತಾಳವಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಇದೇ ಜನವರಿ 8ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಮತ್ತು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜಿನ ನುರಿತ ವೈದ್ಯರು ತಪಾಸಣೆ ನಡೆಸಲಿದ್ದಾರೆ.ಮಾಹಿತಿಗಾಗಿ 9900609777, 6360272053, 8310605138 ಗೆ ಸಂಪರ್ಕಿಸಬಹುದು.
ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
[t4b-ticker]ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಮತ್ತು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜಿನ ನುರಿತ ವೈದ್ಯರು ತಪಾಸಣೆ ನಡೆಸಲಿದ್ದಾರೆ.ಮಾಹಿತಿಗಾಗಿ 9900609777, 6360272053, 8310605138 ಗೆ ಸಂಪರ್ಕಿಸಬಹುದು.
ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
+ There are no comments
Add yours