ಯಲ್ಲಗಟ್ಟ ಗೊಲ್ಲರಹಟ್ಟಿಯಲ್ಲಿ ಮನೆಯ ಗ್ಯಾಸ್ ಸಿಲಿಂಡರ್ ಸ್ಫೋಟ

 

 

 

 

ಚಳ್ಳಕೆರೆ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂರು ಮನೆ ಹಾಗೂ  ಅಂಗಡಿ ಸುಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ವಾಸದ ಮನೆಯಲ್ಲಿ ಇಟ್ಟಿದ್ದ  ಗ್ಯಾಸ  ಸಿಲಿಂಡರ್ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ  ಧಾನ್ಯಗಳು, ಬಟ್ಟೆ  ಹಾಗೂ  ಅಂಗಡಿಯ ವಸ್ತುಗಳು ಸುಟ್ಟಿದ್ದು  ಹೆಚ್ಚು  ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಹೆಚ್ಚಿನ ಅನಾಹುತ ತಪ್ಪಿದೆ.

 

 

ಯಲಗಟ್ಟೆ ಗೊಲ್ಲರಹಟ್ಟಿಯ ಈರಣ್ಣ ಚಂದ್ರಣ್ಣ ಹಾಗೂ ಈರಣ್ಣ ಎಂಬುವರ ಮನೆಗಳಿಗೆ ಹಾನಿಯಾಗಿದೆ . ಸಿಲಿಂಡರ್ ಸ್ಫೋಟಕ್ಕೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಬೆಂಕಿ ಕಾಣಿಸಿಕೊಡ ತಕ್ಷಣವೇ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿದ್ದು ಅಗ್ನಿಶಾಮಕ ದಳದ ತಂಡ ಗ್ರಾಮಕ್ಕೆ ಬರುವ ಸಮಯಕ್ಕೆ ಮನೆಯ ಮೇಲ್ಚಾವಣಿ ಸುಟ್ಟಿದ್ದು ಮನೆಯಲ್ಲಿ ಇದ್ದಂತಹ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದೆ.  ಈ ಅಗ್ನಿ ಅನಾಹುತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.  ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕೆಲಸ ಆಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಸುದ್ದಿ ತಿಳಿಯುತ್ತಿದ್ದಂತೆ   ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ . ಶಶಿಧರ್  ಭೇಟಿ ನೀಡಿ ಅಗ್ನಿ ಅನಾಹುತದಲ್ಲಿ ಮನೆ ಕಳೆದುಕೊಂಡವರಿಗೆ ವೈಯಕ್ತಿಕ ಧನ ಸಹಾಯ ಮಾಡಿದ್ದಾರೆ. ಹಾಗೂ ಸ್ಟುಡಿಯೋ ಮಾಲೀಕ ಭಾನು ವೀರೇಶ್  ಅವರು ಸಹ ವೈಯಕ್ತಿಕ ಧನ ಸಹಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿ  ಹಾಗೂ  ಕಾಂಗ್ರೆಸ್ ಮುಖಂಡ ವೀರೇಶ್ ,ವೆಂಕಟೇಶ್, ಸಿರಿಯಣ್ಣ,  ವೀರಣ್ಣ ಸೇರಿದಂತೆ ಗ್ರಾಮಸ್ಥರು ಮುಖಂಡರು ಇದ್ದರು.

[t4b-ticker]

You May Also Like

More From Author

+ There are no comments

Add yours