ಕೋಲಾರ, (ಫೆಬ್ರವರಿ 19): ಯುಗಾದಿ (Ugadi) ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಮತಾದಂತೆ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಕೋಲಾರದ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು.
ಗ್ಯಾರೆಂಟ್ ಗಳಿಂದ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.
ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ. ಮತಾದಂತೆ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.
ಹೊಸ ವರ್ಷ ಆರಂಭದಲ್ಲಿ ಕೋಡಿಶ್ರೀ ನುಡಿದ ಭವಿಷ್ಯವೇನು?
2024ರ ಹೊಸ ವರ್ಷದ ಆರಂಭದಲ್ಲಿ ಅಂದರೆ ಜನವರಿಯಲ್ಲಿ ಗದಗನಲ್ಲಿ ಮಾತನಾಡಿದ್ದ ಕೋಡಿಶ್ರೀ, 2024 ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಬಾಂಬ್ ಸಿಡಿಯುವ ಸಂಭವವಿದ್ದು, ಯುದ್ಧ ಭೀತಿ ಆವರಿಸಲಿದೆ. ಭೂಕಂಪ.. ಜಲ ಕಂಟಕವೂ ಇದೆ. ಜನರು ತಲ್ಲಣವಾಗುತ್ತಾರೆ ಎಂದು 2024ರ (ಜನವರಿ) ಆರಂಭದಲ್ಲಿ ಭವಿಷ್ಯ ನುಡಿದಿದ್ದ ಕೋಡಿಶ್ರೀ, ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣ.. ಅಸ್ಥಿರತೆ, ಯುದ್ಧ ಭೀತಿ. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ. ಜಗತ್ತಿಗೆ ವಿನಾಶ ಕಾದಿದೆ. ರೋಗ, ಸುನಾಮಿ ಸಂಭವಿಸಲಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ದೈವ ನಂಬುವುದೊಂದೆ ಪರಿಹಾರ. ದೈವ ಮೊರೆ ಹೋಗ್ಬೇಕು ಎಂದು ಹೇಳಿದ್ದರು.
[t4b-ticker]
+ There are no comments
Add yours