ಗುಂಟೂರು (ಆಂಧ್ರಪ್ರದೇಶ)Andhrapradesh: ದೇಶದಲ್ಲಿ ಎಲ್ಲಾ ರಾಜ್ಯಗಳಿಗಿಂತ ವಿಭಿನ್ನ ರಾಜ್ಯ ಆಂಧ್ರಪ್ರದೇಶವಾಗಿದೆ. ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿ ಕುತೂಹಲಕಾರಿ ಬೆಳವಣಿಗೆ ಜರುಗಿದೆ. ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ತಾಯಿ ವೈ.ಎಸ್.ವಿಜಯಮ್ಮ ರಾಜೀನಾಮೆ ಘೋಷಿಸಿದ್ದಾರೆ.
ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಮಿಸ್ ಮಾಡದೇ ಓದಿ.
ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅವರು ತಮ್ಮ ನಿರ್ಧಾರವನ್ನು ಈ ಘೋಷಣೆ ಮಾಡಿದ್ದಾರೆ.
ಕುತೂಹಲದ ಸಂಗತಿ ಏನೆಂದರೆ, ಮಗನ ಪಕ್ಷಕ್ಕೆ ರಾಜೀನಾಮೆ ಕೊಟ್ಟಿರುವ ಅವರು ಮಗಳ ಪರವಾಗಿ ನಿಂತಿದ್ದಾರೆ. ಅವರ ಪುತ್ರಿ, ಜಗನ್ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಹೊಸ ಪಕ್ಷ ಕಟ್ಟಿದ್ದು, ಆಕೆಯ ಜತೆ ತಾವು ನಿಲ್ಲುವುದಾಗಿ ವಿಜಯಮ್ಮ ಹೇಳಿದ್ದಾರೆ.
ಯಾರಿಗೂ ಯಾವುದೇ ಅಭ್ಯಂತರ ಉಂಟಾಗಬಾರದು ಎಂದು ನಾನು ರಾಜೀನಾಮೆ ನೀಡುವ ನಿರ್ಣಯ ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ ಎಂದಿರುವ ವಿಜಯಮ್ಮ, ದಿ.ವೈ.ಎಸ್.ರಾಜಶೇಖರ ರೆಡ್ಡಿ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ನಾನು ತೆಲಂಗಾಣದಲ್ಲಿ ಹೊಸ ಪಕ್ಷದ ಪರವಾಗಿ ನಿಲ್ಲುವ ಅವಶ್ಯಕತೆ ಇದೆ ಎಂದಿದ್ದಾರೆ.
ಮಗಳ ಹೊಸ ಪಕ್ಷದ ಪರವಾಗಿ ನಿಂತಿದ್ದರೂ, ಮಗ ಮತ್ತು ಮಗಳು ಬೇರೆ ಬೇರೆಯಾಗಿರುವುದಕ್ಕೆ ನೋವು ತೋಡಿಕೊಂಡಿರುವ ವಿಜಯಮ್ಮಾ, ಜಗನ್ ಮತ್ತು ಶರ್ಮಿಳಾ ಬೇರೆ – ಬೇರೆ ಪಕ್ಷಗಳು ಮತ್ತು ರಾಜ್ಯಗಳನ್ನು ಪ್ರತಿನಿಧಿಸುವ ಅನಿರ್ವಾಯತೆ ಯಾಕೆ ಬಂದಿದೆ ಎನ್ನುವುದು ನನಗೆ ಗೊತ್ತಿಲ್ಲ. ಅದು ಆ ದೇವರಿಗೆ ಗೊತ್ತು. ಆದರೆ ಒಂದು ಮಾತು ಹೇಳಬಲ್ಲೆ. ಕಷ್ಟದಲ್ಲಿದ್ದಾಗ ನಾನು ಜಗನ್ ಜತೆಗಿದ್ದೆ, ಸಂತೋಷವಾಗಿದ್ದಲೂ ನಾನು ಆತನ ಜತೆಗಿದ್ದರೆ ನನ್ನ ಮಗಳು ಶರ್ಮಿಳಾಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಇದು ನನ್ನ ಮನಸಾಕ್ಷಿಗೆ ಒಪ್ಪುವುದಿಲ್ಲ ಎಂದು ವಿಜಯಮ್ಮ ತಿಳಿಸಿದ್ದಾರೆ.
[t4b-ticker]
+ There are no comments
Add yours