ಚಿತ್ರದುರ್ಗ: ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಹೇಳಿದರು.
ತಾಲೂಕಿನ ಕಾಟೀಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರದ ಅಂಗವಾಗಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕಾರ್ಯನಿರ್ವಹಿಸಿದರೆ, ಸಾರ್ವಜನಿಕ ಸಮಸ್ಯೆ ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳಲು ಸಾಧ್ಯವಿಲ್ಲ. ಇಂದು ನಾನು ಮತ್ತು ಅಧಿಕಾರಿಗಳ ತಂಡ ಕಾಟೀಹಳ್ಳಿಗೆ ಬಂದಿದೆ. ಮ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರ ಸಮಸ್ಯೆಯನ್ನು ಖುದ್ದು ಆಲಿಸಿಲಾಗಿದ್ದು ಕೇಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗುವುದು ಎಂದರು.
15 ಜನರಿಗೆ ಭದ್ರತೆ ಪಿಂಚಣಿ ಆದೇಶ ಪತ್ರ ನೀಡಲಾಗಿದೆ. 5 ಪೌತಿ ಖಾತೆ ಅರ್ಜಿ ಬಂದಿದ್ದು 3 ಅರ್ಜಿಗಳನ್ನು ಬಗೆಹರಿಸಲಾಗಿದೆ. ಉಳಿದ ಎರಡು ಅರ್ಜಿಯನ್ನು ದಾಖಲೆ ಪಡೆದು ಪರಿಹಾರ ಒದಗಿಸಲಾಗುವುದು. ಒಂದು ಪಡಿತರ ಚೀಟಿ ನೀಡಲಾಗಿದ್ದು ಎಲ್ಲಾದಕ್ಕೂ ಪರಿಹಾರ ನೀಡಲು ತಾಲೂಕು ಆಡಳಿತ ಸಿದ್ದವಾಗಿದೆ ಎಂದು ಅಭಯ ನೀಡಿದರು.
ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ 54 ಕ್ಕೂ ಹೆಚ್ಚಿನ ಸೇವೆ ನೀಡಲಾಗುತ್ತಿದೆ. ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಹಲವಾರು ಜನಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇತ್ತೀಚೆಗೆ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮ ನಡೆಸಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು.
[t4b-ticker]
+ There are no comments
Add yours