ಹಿರಿಯೂರು ಜೆಡಿಎಸ್ ಅಭ್ಯರ್ಥಿ IT ಕಾಟ, ಎರಡನೇ ದಿನವೂ ಕಾರ್ಯಚರಣೆ

 

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ನಿವಾಸದ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡನೇ ದಿನವೂ ರವೀಂದ್ರಪ್ಪ ಅವರ ನಿವಾಸದಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿರುವುದಾಗಿ ತಿಳಿದು ಬಂದಿದೆ

ಎಲೆಕ್ಷನ್ ಹೊತ್ತಲ್ಲೇ ಹಿರಿಯೂರು ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್ ತಗುಲಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮುಂಗಸವಳ್ಳಿಯಲ್ಲಿರುವಂತ ಜೆಡಿಎಸ್ ಅಭ್ಯರ್ಥಿ ಎಂ ರವೀಂದ್ರಪ್ಪ ಅವರ ನಿವಾಸದ ಮೇಲೆ ಬೆಂಗಳೂರು ಹಾಗೂ ದಾವಣಗೆರೆಯಿಂದ ಆಗಮಿಸಿದ್ದಂತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆ ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಹಿರಿಯೂರು ತಾಲೂಕಿನ ಮುಂಗಸವಳ್ಳಿಯ ತೋಟದ ಮನೆಯಲ್ಲಿ ಮಹತ್ವದ ದಾಖಲೆಗಳ ಶೋಧಕಾರ್ಯ ಮುಂದುವರೆಸಿರುವಂತ ಐಟಿ ಅಧಿಕಾರಿಗಳಿಗೆ ನಿನ್ನೆ ಯಾವುದೇ ದಾಖಲೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಇಂದು ಕೂಡ ಶೋಧ ಕಾರ್ಯ ಮುಂದುವರೆಸಿರುವುದಾಗಿ ತಿಳಿದು ಬಂದಿದೆ.

[t4b-ticker]

You May Also Like

More From Author

+ There are no comments

Add yours