ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರು, ಕಾಂಗ್ರೆಸ್ ಗೆ ಸೇರ್ತಾರಾ?

 

ಹಿರಿಯೂರು : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯತ್ತ ಚಿತ್ತ

ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆ ಶುಕ್ರವಾರ ಜಿಲ್ಲೆಯ ಚಳ್ಳಕೆರೆ ನಗರ ತಲುಪಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ರಾಜ್ಯದ ಕೆಲವು ಸಚಿವರು, ಶಾಸಕರು ಆಗಮಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಗೈರಾಗಿದ್ದರು. ಇದೀಗ ಮಾರ್ಚ್ 20ರಂದು ಬಿಜೆಪಿ ಸಂಕಲ್ಪ ಯಾತ್ರೆ ಭಾನುವಾರ ಹಿರಿಯೂರು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್‌ನತ್ತ ಮುಖ ಮಾಡಿರುವ ಶಾಸಕಿ ಕೆ ಪೂರ್ಣಿಮಾ ಇರದೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಎಷ್ಟರ ಮಟ್ಟಿಗೆ ನಡೆಯುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

[t4b-ticker]

You May Also Like

More From Author

+ There are no comments

Add yours