ಹೊಳಲ್ಕೆರೆ: ಪಟ್ಟಣದಲ್ಲಿ ಬೀದಿ ನಾಯಿ ಹಾವಳಿ ಜಾಸ್ತಿಯಾಗಿ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಹೊಳಲ್ಕೆರೆ ಪುರಸಭೆ ವತಿಯಿಂದ ಹೊಳಲ್ಕೆರೆ ಪಟ್ಟಣದಲ್ಲಿ ಕಳೆದ 03 ದಿನಗಳಿಂದ ಬೀದಿನಾಯಿಗಳನ್ನು ಹಿಡಿದು ಪಶುವೈದ್ಯರಿಂದ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಲಾಯಿತು. ಪಟ್ಟಣದಲ್ಲಿ ಬೀದಿ ನಾಯಿ ಹಾವಳಿ ತಡೆಗಟ್ಟಲು ಆಗಿಂದಾಗ್ಗೆ ಪುರಸಭೆ ವತಿಯಿಂದ ಸಂತಾನ ಹರಣ ಚಿಕಿತ್ಸೆ ಮಾಡಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ವಾಸಿಂ ತಿಳಿಸಿದ್ದಾರೆ. ಹೊಳಲ್ಕೆರೆ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಮಂಜಪ್ಪ ಆರ್, ಹೊಳಲ್ಕೆರೆ ಪುರಸಭೆಯ ಆರೋಗ್ಯ ನಿರೀಕ್ಷಕರಾದ ಮಹಮದ್ ಶೌಕತ್ ಅಲಿ ಹಾಗೂ ಇನ್ನಿತರೆ ಪುರಸಭೆ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು
[t4b-ticker]
+ There are no comments
Add yours