ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರಿಗೆ ಕುವೆಂಪು ವಿವಿ 33ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನ್ನು ಗ್ರಾಮೀಣಾಭಿವೃದ್ಧಿ ಕ್ಷೇತ್ರ ಪರಿಗಣಿಸಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ. ಇವರು, ರಾಜಕಾರಣಿ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪಕರು. ಚಿತ್ರದುರ್ಗ ಜಿಲ್ಲೆಯ ದೇವರಾಜ್ ಅರಸ್ ಶಿಕ್ಷಣ ಸಮೂಹದ ಸ್ಥಾಪಕರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕಾಂಗ ಸಮಿತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುತ್ತಾರೆ. ಇವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.
[t4b-ticker]
+ There are no comments
Add yours