ಬೆಂಗಳೂರು: ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೋಕ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿ. ಸೋಮಣ್ಣ, ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಮನೆ ಮಗನಾಗಿ ನೋಡಿಕೊಂಡಿದ್ದಾರೆ. ನಾನು ಯಾರ ಬಗ್ಗೆಯೂ ಮತನಾಡಿಲ್ಲ. ಈಗಾಗಲೇ ನಾನು ರಾಜ್ಯಾಧ್ಯಕ್ಷರು, ಸಿಎಂ ಜತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ ಎಂದರು.ನನಗೆ ಈಗ 72 ವರ್ಷ, ಆಗಬೇಕಿರುವುದು ಏನೂ ಇಲ್ಲ. ಆದರೆ ಸೋಮಣ್ಣ ನಿಂತ ನೀರಲ್ಲ, ಹರಿಯುವ ನೀರು ಎಂದಿದ್ದಾರೆ.
ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನಾನು ಏನು ಮಾತಾಡುವುದಿಲ್ಲ. ನಾನು ಯಾರ ಬಗ್ಗೆಯೂ ಒಂದು ಸಣ್ಣ ಅಪಚಾರವೂ ಮಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ನನಗೆ ಏನು ಹೇಳಿದ್ದಾರೆ ಅಂತ ನನಗೆ ಮಾತ್ರ ಗೊತ್ತಿದೆ. ಆದರೆ ಅವರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡು, ನನ್ನ ಹೊಟ್ಟೆಪಾಡಿಗೋಸ್ಕರ ಏನೋ ಮಾಡಬೇಕು, ಅದನ್ನು ಮಾಡ್ಕೊಂಡು ಹೋಗುತ್ತಿದ್ದೇನೆ ಎಂದರು.
[t4b-ticker]
+ There are no comments
Add yours