ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ.
ಇದನ್ನು ಓದಿ: ಚಾಲಕನ ನಿಯಂತ್ರದ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ ಮುಖ ಪೀಸ್
ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಿ, 8 ಜನರನ್ನು ಉಪಮುಖ್ಯಮಂತ್ರಿ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಆರ್ ಎಸ್ಎಸ್ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಸಿಎಂ ಬಗ್ಗೆ ನಿರ್ಧರಿಸಲಾಗಿದ್ದು, ಪ್ರಹ್ಲಾದ್ ಜೋಶಿ ಅವರೇ ಮುಂದಿನ ಮುಖ್ಯಮಂತ್ರಿ ಆಗ್ತಾರೆ. ಕರ್ನಾಟಕದ ಜನರು ಆರ್ ಎಸ್ಎಸ್, ಬಿಜೆಪಿ ಕಳ್ಳಾಟಕ್ಕೆ ಬಲಿಯಾಗಬೇಡಿ. ಆರ್ ಎಸ್ಎಸ್ ನವರು ನಿರ್ಧಾರ ಮಾಡಿರುವ ಬ್ರಾಹ್ಮಣ ಸಿಎಂ ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲ. ಮಹಾರಾಷ್ಟ್ರ ಭಾಗದ ಪೇಶ್ವೇಗಳು, ಶೃಂಗೇರಿ ಮಠ ಒಡೆದವರ ಭಾಗದ ಬ್ರಾಹ್ಮಣರ ಗುಂಪಿಗೆ ಸೇರಿದವರು.
[t4b-ticker]
+ There are no comments
Add yours