********** ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಈ ಬಾರಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಆರ್ಪಿಐ ಯುವರಾಜ್ ಎಸ್.ಎಸ್. ಪರೇಡ್ ಕಮಾಂಡರ್ ಅವರ ಮುಂದಾಳತ್ವದಲ್ಲಿ ಒಟ್ಟು 23 ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಪಿಎಸ್ಐ ಮಂಜುನಾಥ ಲಿಂಗಾರೆಡ್ಡಿ ನೇತೃತ್ವದಲ್ಲಿ ನಾಗರಿಕ ಪೊಲೀಸ್ ತುಕಡಿ, ತಿಪ್ಪೇಸ್ವಾಮಿ ನೇತೃತ್ವದಲ್ಲಿ ಗೃಹರಕ್ಷಕ ದಳ, ನಾಗರಾಜ್ ನೇತೃತ್ವದಲ್ಲಿ ಅಬಕಾರಿ ಇಲಾಖೆ, ಅರಣ್ಯ ಇಲಾಖೆ- ವಸಂತ, ಸರ್ಕಾರಿ ವಿಜ್ಞಾನ ಕಾಲೇಜು ಎನ್ಸಿಸಿ- ಸಹನಾ ಬಿ., ಸಂತ ಜೋಸೆಫ್ ಕಾನ್ವೆಂಟ್- ಮೋಹನಾಂಬ, ಆದಿಯಾ ರಜ್ವಿ, ವಿದ್ಯಾ ವಿಕಾಸ ಶಾಲೆ- ಧರಣಿ, ಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ಬಾಲಕಿಯರ ಪ್ರೌಢಶಾಲೆ- ಸಾಧನಾ, ಸಂತ ಜೋಸೆಫ್ ಇಂಗ್ಲೀಷ್ ಶಾಲೆ- ರಿತಿಕಾ, ಗಾರ್ಡಿಯನ್ ಏಂಜಲ್ ಶಾಲೆ- ಬಿಂದುಶ್ರೀ, ಪಾಶ್ರ್ವನಾಥ ಶಾಲೆ- ಊರ್ಮಿಳಾ, ಮೌಲಾನಾ ಆಜಾದ್ ವಸತಿ ಶಾಲೆ- ಫರ್ಮಾನ್, ಬಾಲಕರ ಸ.ಪ.ಪೂ. ಕಾಲೇಜು- ಬಸವರಾಜ ಎಂ., ವಿದ್ಯಾ ವಿಕಾಸ ಆಂಗ್ಲ ಪ್ರೌಢಶಾಲೆ- ಶ್ರೀರಾಮ, ಬಾಲಕಿಯರ ಸ.ಪ.ಪೂ. ಕಾಲೇಜು- ಶಾಫಿಯಾ, ವಾಸವಿ ಪ್ರೌಢಶಾಲೆ- ಭೂಮಿಕಾ, ಗೂಳಯ್ಯನಹಟ್ಟಿ ಬಾಲಕರ ಮೊರಾರ್ಜಿ ದೇಸಾಯಿ ವಸತಿ ಶಾಲೆ- ಗಣೇಶ್, ಡಾನ್ಬೋಸ್ಕೋ ಶಾಲೆ- ಚೇತನ್, ಜ್ಞಾನಭಾರತಿ ಶಾಲೆ- ಕಾರ್ತಿಕ್, ಮದಕರಿಪುರ ಶಾಲೆ ಭಾರತ ಸೇವಾ ದಳ- ಗೀತಶ್ರೀ ನೇತೃತ್ವದ ಕವಾಯತು ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿ ಗಮನ ಸೆಳೆದರು.
ಮನಸೂರೆಗೊಂಡ ಸಾಂಸ್ಕøತಿಕ ಕಾರ್ಯಕ್ರಮ :
*************ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಂದ ಏರ್ಪಡಿಸಲಾದ ಸಾಂಸ್ಕøತಿಕ ಕಾರ್ಯಕ್ರಮಗಳು ದೇಶದ ಅಭಿಮಾನ ಹಾಗೂ ಸ್ವಾಭಿಮಾನವನ್ನು ಬಡಿದೆಬ್ಬಿಸಿದವು ಅಲ್ಲದೆ, ನಮ್ಮ ದೇಶದ ಸಂಸ್ಕøತಿ, ವಿವಿಧತೆಯಲ್ಲಿ ಏಕತೆಯೊಂದಿಗಿನ ಸಾಂಸ್ಕøತಿಕ ಸಮ್ಮಿಲನಕ್ಕೆ ಸಾಕ್ಷಿಯಾದವು. ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ವತಿಯಿಂದ ಒಟ್ಟು 300 ವಿದ್ಯಾರ್ಥಿನಿಯರು ಪ್ರಸ್ತುತಪಡಿಸಿದ ಏಕತೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಸಂಸ್ಕøತಿಯ ಸೊಗಡು ಜೊತೆಗೆ ತಮಿಳುನಾಡು, ಕೇರಳ, ಗುಜರಾತ್, ಮಹಾರಾಷ್ಟ್ರ, ಕಾಶ್ಮೀರ, ಪಂಜಾಬ್ ಮುಂತಾದ ರಾಜ್ಯಗಳಲ್ಲಿನ ಪಾರಂಪರಿಕ ನೃತ್ಯಗಳು ಅನಾವರಣಗೊಂಡವು. ಗಾರ್ಡಿಯನ್ ಏಂಜಲ್ ಪ್ರೌಢಶಾಲೆ ಮಕ್ಕಳು ನಡೆಸಿಕೊಟ್ಟ ಜಲಿಯನ್ ವಾಲಬಾಗ್ನ ದುರಂತವನ್ನು ನೆನೆಪಿಸಿತು. ವೆಸ್ಟ್ರನ್ಹಿಲ್ ಶಾಲೆ ಹಾಗೂ ಅಗಸನಕಲ್ಲು ಸರ್ಕಾರಿ ಪ್ರೌಢಶಾಲೆ ಮಕ್ಕಳು ನಡೆಸಿದ ಆಕರ್ಷಕ ನೃತ್ಯ ನೋಡುಗರ ಮನಸೂರೆಗೊಂಡಿತು.
ಸಾಧಕರಿಗೆ ಸನ್ಮಾನ : ಭಾರತದ 74ನೇ ಗಣರಾಜ್ಯೋತ್ಸದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ 14 ಜನ ಸಾಧಕರನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಸನ್ಮಾನಿಸಿ ಗೌರವಸಿದರು. ಸನ್ಮಾನಿತರ ವಿವರ ಇಂತಿದೆ. ಕ್ರೀಡಾಪುಟುಗಳಾದ ಪ್ರಜಾ.ಸಿ.ಎಸ್, ಸದ್ದಾಂ ಹುಸೇನ್, ವೈಶಾಲಿ, ಗುರುರಾಜ್.ಪಿ., ಛಾಯಾಶ್ರೀ.ಎನ್.ಎಂ., ಲಿಖಿತ್.ಎಂ.ಸಿ, ಪ್ಯಾರಾ ಅಥ್ಲೆಟಿಕ್ಸ್ ರಾಧ.ವಿ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಸಾಧನೆ ಮಾಡಿದ ಡಾ.ಹೆಚ್.ಏಕಾಂತಯ್ಯ, ಡಾ.ಎಸ್.ಸಿ.ವೀರಭದ್ರಪ್ಪ, ಸೇವಾದಳ ಬೆಳೆವಣಿಯಲ್ಲಿ ಪ್ರಮುಖ ಪಾತ್ರವಹಿಸಿದ ದೈಹಿಕ ಶಿಕ್ಷಕರಾದ ಟಿ.ಲೋಕೇಶ್ವರ, ಮೆಹಬೂಬಿ, ಗ್ರಾಮ ಒನ್ ಯೋಜಯಡಿ ಸರ್ಕಾರದ ಯೋಜನೆಗಳನ್ನು ನಾಗರಿಕರಿಗೆ ತಲುಪಿಸಲು ಶ್ರಮಿಸಿದ ಇಸ್ಮಾಯಿಲ್, ಶಿವರಾಜ್, ಹುಸೇನ್ ಅವರನ್ನು ಸನ್ಮಾನಿಸಲಾಯಿತು.
ಲ್ಯಾಪ್ಟಾಪ್ ವಿತರಣೆ :
******** ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ 05 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಇದೇ ಸಂದರ್ಭದಲ್ಲಿ ವಿತರಿಸಿದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಹೆಚ್.ಕುಮಾರಸ್ವಾಮಿ, ಜಿ.ಪಂ.ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
==========
+ There are no comments
Add yours