ವಿಧಾನಸಭೆ/ವಿಧಾನಪರಿಷತ್ತು (ಸುವರ್ಣಸೌಧ, ಬೆಳಗಾವಿ): ಬರಗಾಲದಿಂದ ಬೇಸತ್ತಿರುವ ರೈತರಿಗೆ ಎನರ್ಜಿ ಬುಸ್ಟ್ ನೀಡುವ ದೃಷ್ಟಿಯಿಂದ ರೈತರು ಸಹಕಾರಿ ಬ್ಯಾಂಕು ಗಳಿಂದ(Cooperative Banks)ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಕಾಲಮಿತಿಯೊಳಗೆ ಪಾವತಿಸಿದವರಿಗೆ ಮಾತ್ರ ಈ ಬಡ್ಡಿ ಮನ್ನಾ ಭಾಗ್ಯ ದೊರೆಯಲಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದ ಅವರು ಈ ವಿಚಾರವನ್ನು ಶುಕ್ರವಾರ ಪ್ರಕಟಿಸಿದರು.
‘ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಭರವಸೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರಲಿಲ್ಲ . ಆದರೆ ಬರ ಮತ್ತು ರೈತರ ಸಂಕಷ್ಟದ ಕಾರಣದಿಂದ ಬಡ್ಡಿ ಮನ್ನಾ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದರು.
ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಕರೆಂಟ್ ಇರಲ್ಲ
‘2018ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಕೃಷಿ ಸಾಲ ಮನ್ನಾ ಮಾಡಲಿಲ್ಲ. ವಿಧಾನಪರಿಷತ್ನಲ್ಲಿ ವಿ.ಎಸ್. ಉಗ್ರಪ್ಪ ಅವರು ಈ ವಿಷಯ ಪ್ರಸ್ತಾಪಿಸಿದಾಗ, ‘ನಾವು ನೋಟು ಪ್ರಿಂಟ್ ಮಾಡುವ ಯಂತ್ರ ಇಟ್ಟಿಲ್ಲ’ ಎಂದು ಯಡಿಯೂರಪ್ಪ ಉತ್ತರ ಕೊಟ್ಟಿದ್ದರು’ ಎಂದು ಸಿದ್ದರಾಮಯ್ಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದರು.
[t4b-ticker]
+ There are no comments
Add yours