15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ  

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.05:
ಜಿಲ್ಲಾಮಟ್ಟದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಪರಿಶೀಲನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅಲ್ಪಸಂಖ್ಯಾತ ಸಮುದಾಯ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾಮಟ್ಟದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಸಮಿತಿಗೆ ಮೂರು ಸದಸ್ಯರನ್ನು ನಾಮನಿರ್ದೇಶನ ಮಾಡುವಂತೆ ಕರ್ನಾಟಕ  ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿಗಳ ಸೂಚಿಸಿರುತ್ತಾರೆ. ಪ್ರಯುಕ್ತ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸವಿರುವ ಅಲ್ಪಸಂಖ್ಯಾತ ಸಮುದಾಯ ಅಭಿವೃದ್ಧಿಗಾಗಿ ಶ್ರಮಿಸಿರುವ ಮುಸ್ಲಿಂ-1, ಕ್ರಿಶ್ಚಿಯನ್-1, ಜೈನ್-1 ಅಲ್ಪಸಂಖ್ಯಾತ ಸಮುದಾಯ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಪತ್ರಕರ್ತರ ಸಮ್ಮೇಳನ:ಬೆಣ್ಣೆ ನಗರಯಲ್ಲಿ ಸಾರೋಟಿನಲ್ಲಿ ಸಾರಥಿಗಳ ಮೆರಗು

ಆಸಕ್ತರು ನಿಗದಿತ ಅರ್ಜಿಯನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು  ಇದೇ ಫೆ.10ರೊಳಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಶ್ರೀರಾಮ ಕಾಂಪ್ಲೇಕ್ಸ್‍ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours