ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ಗ್ಯಾರೆಂಟಿ

 

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿಕೊಂಡಿದ್ದರೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸಲ್ಲ, ಅವರು ಮೈಸೂರಿಗೆ ಹೋಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭವಿಷ್ಯ ಹೇಳುತ್ತಿಲ್ಲ. ನನ್ನ ಪ್ರಕಾರ ಸಿದ್ದರಾಮಯ್ಯ((Siddaramaiah) ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಅವರು ಮೈಸೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾರೆ. ಆದರೂ ಅವರು ರಾಜಕೀಯ ನಾಟಕ ಮಾಡುತ್ತಿದ್ದಾರೆ. ಒಮ್ಮೆ ಎಲ್ಲಿ ನಿಲ್ಲುತ್ತಾರೆಂದು ಖಚಿತವಾದ ಬಳಿಕ ನಾವು ನಮ್ಮ ಮುಂದಿನ ತಂತ್ರಗಾರಿಕೆ ಮಾಡಬೇಕು, ಅದನ್ನು ಮಾಡುತ್ತೇವೆ. ಸಿದ್ದರಾಮಯ್ಯ ಎರಡು ಕಡೆಯಾದರೂ ಸ್ಪರ್ಧೆ ಮಾಡಲಿ, ಮೂರು ಕಡೆಯಾದರೂ ಸ್ಪರ್ಧೆ ಮಾಡಲಿ, ಅವರು ಸೋತು ಮನೆಗೆ ಹೋಗುವುದಂತು ನಿಶ್ಚಿತ ಎಂದರು

[t4b-ticker]

You May Also Like

More From Author

+ There are no comments

Add yours