ಚಿತ್ರದುರ್ಗ: ನಗರಸಭೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 18 ನೇ ವಾರ್ಡಿನ ಸದಸ್ಯ ಕೆ.ಬಿ.ಸುರೇಶ್ ಅವಿರೋಧವಾಗಿ ಆಯ್ಕೆಯಾದರು.
ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ರವರ ಒಂದು ವರ್ಷದ ಅವಧಿ ಪೂರ್ಣಗೊಂಡಿದ್ದರಿಂದ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಬಿ.ಸುರೇಶ್ ಎಲ್ಲಾ ಸದಸ್ಯರು ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿದ್ದು, ಜನತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧ್ಯಕ್ಷರ ಹಾಗೂ ಸರ್ವ ಸದಸ್ಯರ ಸಹಕಾರ ಪಡೆದು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಸದಸ್ಯರುಗಳಾದ ಶಶಿಧರ್, ಶ್ರೀನಿವಾಸ್, ಭಾಸ್ಕರ್, ಹರೀಶ್, ವೆಂಕಟೇಶ್, ಮಹಮದ್ ಅಹಮದ್ ಪಾಷ, ನಸ್ರುಲ್ಲಾ, ಜೈನುಲ್ಲಾಬ್ದಿನ್, ಡಿ.ಮಲ್ಲಿಕಾರ್ಜುನ್, ಗೊಪ್ಪೆ ಮಂಜುನಾಥ್, ದೀಪು, ಬಾಲಮ್ಮ, ಭಾಗ್ಯಮ್ಮ ಸೇರಿದಂತೆ ನಗರಸಭೆ ಸಿಬ್ಬಂದಿಯವರು ಈ ಸಂದರ್ಭದಲ್ಲಿ ಹಾಜರಿದ್ದು ಕೆ.ಬಿ.ಸುರೇಶ್ಗೆ ಅಭಿನಂದಿಸಿದರು.
[t4b-ticker]
+ There are no comments
Add yours