ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಸ್ವಾಗತಕೋರಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಗೀತೆಯ ಬೋಧನೆಗಳು ಪ್ರಪಂಚದಲ್ಲಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರ್ಪಡೆ ಮಾಡಬೇಕೆಂದು ಪತ್ರ ಬರೆದಿದ್ದಾರೆ.






