ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ಕ್ಷೇತ್ರದಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಲಿ: ಸಚಿವ ಬಿ.ಶ್ರೀರಾಮುಲು ಗುಡುಗು

 

 

 

 

ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ದೇ
ಮುಂದಿನ ದಿನಗಳಲ್ಲಿ ಶ್ರೀರಾಮುಲು ಕ್ಷೇತ್ರದಿಂದ ಪಲಾಯನವಾಗುತ್ತಾರೆ ಎಂದು ಕಾಂಗ್ರೆಸ್‌ನವರು ಹೇಳಿಕೊಳ್ಳಿತ್ತಿದ್ದಾರಂತೆ. ನಾನು ಎಲ್ಲಿಗೂ ಪಲಾಯನವಾಗುವುದಿಲ್ಲ. ಇದೇ ಮೊಳಕಾಲ್ಮುರು ಕ್ಷೇತ್ರದಂದಲೇ ಸ್ಪರ್ಧಿಸುತ್ತೇನೆ. ಮೊಳಕಾಲ್ಮುರು ಸೇರಿದಂತೆ ರಾಜ್ಯದಲ್ಲಿ 150ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ಕ್ಷೇತ್ರದಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.
ಹಾಗೇ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ಮಧ್ಯೆ ಕಾಂಗ್ರೆಸ್ ನಲುಗಿದೆ. ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟç ನಾಯಕರು ಚುನಾವಣೆಗಳಲ್ಲಿ ಸತತ ಸೋಲಿನಿಂದ ಕಂಗೆಟ್ಟು ತಲೆಮರಿಸಿಕೊಂಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂಬ ಜೋಡೆತ್ತುಗಳು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಹೊರಟಿವೆ. ಹಾಗೇ ಮೊಳಕಾಲ್ಮುರು ಕ್ಷೇತ್ರದಲ್ಲಿ ಇಬ್ಬರು ಕಾಂಗ್ರೆಸ್‌ನ ನಾಯಕರು ವಿರುದ್ಧ ದಿಕ್ಕಿನಲ್ಲಿದ್ದಾರೆ. ಇಂತವರು ನನ್ನ ಎದುರು ಸ್ಪರ್ಧಿಸಿ ಗೆಲ್ಲುತ್ತಾರೆಯೇ ಎಂದು ವ್ಯಂಗ್ಯವಾಡಿದರು.

 

 

[t4b-ticker]

You May Also Like

More From Author

+ There are no comments

Add yours