ದಾವಣಗೆರೆ:3 :Davanagere: ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ.
ಸಿದ್ದರಾಮಯ್ಯನವರನ್ನು ಹಿಂದುಳಿದ ವರ್ಗಗಳ ನಾಯಕ ಎನ್ನಬೇಡಿ.ಸಿದ್ದರಾಮಯ್ಯ ಸರ್ವ ಜನಾಂಗಗಳ, ಸರ್ವ ಧರ್ಮಗಳ ನಾಯಕ ಎಂದು ತನ್ನದೇ ಶೈಲಿಯಲ್ಲಿ ಡಿಕೆಶಿ ವರ್ಣಿಸಿದ್ದಾರೆ. ಬಸವಣ್ಣನವರ ಜನ್ಮದಿನದಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯನವರು ಶ್ರೀಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರಿಯ ಯೋಜನೆಗಳ ಮೂಲಕ ಬಡವರ ಆಶಾ ಕಿರಣರಾಗಿದ್ದರು.
ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ನಾವುಗಳು ಮುಂದುವರಿಯೋಣ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸೋಣ ಎಂದು ಹೇಳಿದ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ನೆರೆದಿದ್ದವರಲ್ಲಿ ಮನವಿ ಮಾಡಿದರು.
[t4b-ticker]
+ There are no comments
Add yours