ಬಹಳಷ್ಟು ಜನರು ಉಪದೇಶಗಳನ್ನು ಬೋಧಿಸುತ್ತಾರೆ. ಆದರೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದಿಲ್ಲ. ಗಾಂಧೀಜಿ ಹೀಗೆ ಇರಲಿಲ್ಲ. ಅವರು ಬೋಧಿಸಿ ಎಲ್ಲಾ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಂಡು ಚಾಚು ತಪ್ಪದೇ ಪಾಲಿಸಿಕೊಂಡು ಬಂದರು. ಹಾಗಾಗಿಯೇ ಅವರನ್ನು ರಾಷ್ಟ್ರಪಿತ ಎಂದು ಕರೆದು ಗೌರವಿಸಲಾಗುತ್ತಿದೆ. ಗಾಂಧೀಜಿ ಹಾಗೂ ಜರ್ಮನಿಯ ಹಿಟ್ಲರ್ ಒಂದೇ ಕಾಲಘಟ್ಟದಲ್ಲಿ ಜೀವಿಸಿದ್ದರು. ಆದರೆ ಗಾಂಧೀಜಿಯವರು ಜನತೆಯ ಮೇಲೆ ಬೀರಿದ ಪರಿಣಾಮ ಹಾಗೂ ಹಿಟ್ಲರ್ ಸರ್ವಾಧಿಕಾರಿ ಧೋರಣೆಗೂ ತುಂಬಾ ವ್ಯತ್ಯಾಸವಿದೆ. ಹಿಟ್ಲರ್ ಬಗ್ಗೆ ಜನರಲ್ಲಿ ಇದಿದ್ದು ಭಯ, ಆದರೆ ಗಾಂಧೀಜಿ ಬಗ್ಗೆ ಭಾರತೀಯರಲ್ಲಿ ಇದ್ದಿದ್ದು ಪ್ರೀತಿ. ಗಾಂಧೀಜಿ ಎಂದಿಗೂ ಸ್ವಾರ್ಥ ಚಿಂತನೆ ಮಾಡಲಿಲ್ಲ. ಸತ್ಯ, ಅಹಿಂಸೆ, ಸರ್ವಧರ್ಮ ಸಮನ್ವಯತೆ ಪಾಲಿಸಿದರು. ಪ್ರತಿಯೊಬ್ಬರು ತಮ್ಮ ಜೀವನದಲ್ಲಿನ ಕೊರತೆಗಳ ಬಗ್ಗೆ ಚಿಂತಿಸದೇ, ತಮ್ಮಲ್ಲಿನ ಶಕ್ತಿಯ ಬಗ್ಗೆ ಧನಾತ್ಮಕವಾಗಿ ಚಿಂತಿಸಿದರೆ ಜೀವನದಲ್ಲಿ ಉತ್ತುಂಗ ಸ್ಥಾನಕ್ಕೆ ಏರಬಹುದು. ಗಾಂಧೀಜಿ ಸರ್ವಧರ್ಮಗಳ ಸಾರ ಒಂದೇ ಎಂದು ತಿಳಿಸಿದರು. ಈ ಭಾವನೆ ದೇಶದ ಪ್ರತಿಯೊಬ್ಬ ಜನರಲ್ಲಿ ಇರುವುದರಿಂದಲೇ ದೇಶದಲ್ಲಿ ಹಲವಾರು ಧರ್ಮಗಳಿದ್ದರೂ ಶಾಂತಿ ನೆಲೆಸಿದೆ. ದೇಶ ಒಕ್ಕೂಟ ವ್ಯವಸ್ಥೆಯಡಿ ಒಗ್ಗಟಿನಿಂದ ಮುಂದುವರಿಯುತ್ತಿದೆ. ಮಹಾತ್ಮಾ ಗಾಂಧೀಜಿಯವರ ಸರಳ ಜೀವನ, ತತ್ವಗಳ ಬಗ್ಗೆ ಇಂದಿನ ಪೀಳಿಗೆ ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಪ್ರಾಮಾಣಿಕವಾಗಿ ದೇಶವನ್ನು ಮುನ್ನೆಡೆಸಿದ ಕೀರ್ತಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರಿಗೆ ಸಲ್ಲುತ್ತದೆ. ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆದು ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಸರಳತೆ, ನೇರ ನಡೆ-ನುಡಿಗಳಿಂದ ಅತೀ ಎತ್ತರಕ್ಕೆ ಬೆಳೆದು, ಸತ್ಯ, ಶಾಂತಿ, ಅಹಿಂಸೆ ಎಂಬ ಮಹಾ ಅಸ್ತ್ರಗಳೊಡನೆ ಬ್ರಿಟೀಷರನ್ನು ಮಣಿಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಹೆಮ್ಮೆಯ ವಿಶ್ವನಾಯಕರು. ಅವರ ಜೀವನಗಾಥೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಬೇಕಿದೆ ಎಂದರು.
ಗಾಂಧೀಜಿ ಅವರ ಜೀವನ ಆದರ್ಶಗಳನ್ನು ಜನರಿಗೆ ವಿಶೇಷವಾಗಿ ಯುವ ಸಮುದಾಯಕ್ಕೆ ಪರಿಚಯಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವಿದ್ಯಾರ್ಥಿ ಯುವಜನರಲ್ಲಿ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿತ್ತು, ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಸಂತಜೋಸೆಫ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮಾಡಿದರು. ಮೀನಾಕ್ಷಿ ಭಟ್, ಆರ್.ಎಂ.ಅಮೃತ, ತೇಜಸ್ವಿನಿ ಮತ್ತು ಸಂಗಡಿಗರು ವೈಷ್ಣವ ಜನತೋ ಹಾಗೂ ರಘುಪತಿ ರಾಘವ ರಾಜಾರಾಂ, ರಾಮ್ಧುನ್ ಗೀತಗಾಯನ ನಡೆಸಿಕೊಟ್ಟರು.
ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:
***************ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
+ There are no comments
Add yours