ಚಿತ್ರದುರ್ಗ:ಅ.20: ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ರಾಜಕಾರಣಿ, ರಾಜ್ಯ ಮತ್ತು ರಾಷ್ಟ್ರೀಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸುವ ಮೂಲಕ ಇಂದು ನೂತನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ಜನತೆ ಮತ್ತು ವಿಶೇಷವಾಗಿ ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಕೆಪಿಸಿಸಿ ಸದಸ್ಯೆ ಸವಿತಾ ರಘು ಸಂತಸ ವ್ಯಕ್ತಪಡಿಸಿದ್ದಾರೆ..
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ತೆರು ಏಳೆಯುವ ಮೂಲಕ ಸೋಲಿಲ್ಲಸ ಸರದಾರನಂತೆ ಬಂದವರು ನಮ್ಮ ಹೆಮ್ಮೆಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಎಂದು ಹೇಳಬಹುದು. ವಿಧಾನಸಭೆ, ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ, ವಿರೋಧ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಗಳಿಸಿರುವ ಮಲ್ಲಿಕಾರ್ಜುನ ಖರ್ಗೆ, ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾಗಿದ್ದ ವೇಳೆ ಕಾರ್ಮಿಕರ ಹಿತಕ್ಕಾಗಿ ಮಾಡಿದ ಯೋಜನೆಗಳು ಅದ್ವಿತೀಯವಾಗಿವೆ.
ಕರ್ನಾಟಕ ರಾಜ್ಯದ ಖರ್ಗೆ ಅತ್ಯಧಿಕ ಬಹುಮತಗಳ ಅಂತರದಿಂದ ಗೆಲುವು ಕಂಡಿರುವುದು. ರಾಜ್ಯ, ರಾಷ್ಟ್ರ ರಾಜಕಾಣದಲ್ಲಿ ಬದಲಾವಣೆ ಮುನ್ಸೂಚನೆಗೆ ಮುನ್ನುಡಿ ಬರೆದಿದೆ.
ಉತ್ತರ ಭಾರತದವರೇ ಹೆಚ್ಚಾಗಿ ರಾಷ್ಟ್ರರಾಜಕಾರಣದಲ್ಲಿ ಮಿಂಚುವ ಸಂದರ್ಭ, ಎಐಸಿಸಿ ಅಧ್ಯಕ್ಷರಾಗಿ ಎಸ್.ನಿಜಲಿಂಗಪ್ಪ, ಪ್ರಧಾನ ಮಂತ್ರಿಯಾಗಿ ಎಚ್.ಡಿ.ದೇವೇಗೌಡರ ಬಳಿಕ ಅತ್ಯುನ್ನತ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಖರ್ಗೆ ಅಲಂಕರಿಸುತ್ತಿರುವ ಸಂಭ್ರಮಕ್ಕೆ ಕಾರಣವಾಗಿದೆ.
ಬರುವ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಪಕ್ಷ ಬಲಿಷ್ಠಗೊಳ್ಳಲಿದ್ದು ಸರ್ವ ಸಮಾಜವನ್ನು ಜಾತ್ಯತೀತ ಮನೋಭಾವದಿಂದ ಮುನ್ನೆಡೆಸಿಕೊಂಡು ಹೋಗುವ ಹಾಗೂ ರಾಜ್ಯ ಮತ್ತು ಕೇಂದ್ರದ ಜನ ವಿರೋಧಿ ನೀತಿಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಖರ್ಗೆ ಜೀ ಅವರ ಸಾರಥ್ಯದಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾರೂ ಪಕ್ಷ ಸಂಘಟನೆಗೆ ಒತ್ತು ನೀಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
+ There are no comments
Add yours