ಬೆಳಗಾವಿ: ನಗರದ ಸುವರ್ಣಸೌಧದಲ್ಲಿ ವಿದೇಶಗಳಲ್ಲಿ ಕೋವಿಡ್ ಹೆಚ್ಚಳದ ಕಾರಣ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ಹಾಗೂ 3ನೇ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇಂದು ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಬಳಿಕ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಸಿಎಂ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು. ಜಾಗತಿಕ ಸ್ಥಿತಿಗತಿಗಳು ಹೇಗಿದೆ ಎನ್ನುವ ಬಗ್ಗೆ ಅಧ್ಯಯನ ಮಾಡಿ ವರದಿಯನ್ನು ನೀಡಲಾಗಿದೆ. ಅದರ ಆಧಾರದಲ್ಲಿ ನಮ್ಮ ರಾಜ್ಯದಲ್ಲಿ ಮುನ್ನಚ್ಚರಿಕೆ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಅದರಲ್ಲಿ ಐಎಲ್ಐ ಮತ್ತು ಸಾರಿ ಪ್ರಕರಣದಲ್ಲಿ ಕಡ್ಡಾಯವಾಗಿ ಟೆಸ್ಟಿಂಗ್ ಮಾಡುವಂತೆ ತೀರ್ಮಾನ ಮಾಡಲಾಗಿದೆ. ಮಾಸ್ಕ್ ಅನ್ನು ಒಳಾಂಗಣ ಪ್ರದೇಶದಲ್ಲಿ ಧರಿಸಬೇಕು ಎಂಬುದಾಗಿ ಸಲಹೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
[t4b-ticker]
+ There are no comments
Add yours