ಬಿಜೆಪಿ ಗೆ ಶಾಕ್: ಕಮಲ ಬಿಟ್ಟು ಕೈ ಹಿಡಿಯಲು ಸಿದ್ದವಾದ ಸಚಿವ ಕೆಸಿಎನ್?

 

ಮಂಡ್ಯ: ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರ ಅಬ್ಬರ ಪ್ರಚಾರ ಶುರುವಾಗಿದ್ರೆ, ಇನ್ನೊಂದು ಕಡೆ ಅಭ್ಯರ್ಥಿಗಳು ತಮ್ಮ ಕ್ಷೇತ್ರ ಭದ್ರತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಕೆಲವರು ಪಕ್ಷದಿಂದ ಪಕ್ಷಕ್ಕೆ ಹಾರುವುದಕ್ಕೆ ಶುರು ಮಾಡಿದ್ದಾರೆ.

ಸದ್ಯ ಮಾರ್ಚ್ 12ರಂದು ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹೊತ್ತಿನಲ್ಲಿಯೇ ಬಿಜೆಪಿಗೆ ಬಿಗ್‌ ಶಾಕ್‌ ಕಾದಿದೆ. ಏನಾಪ್ಪ ಅಂದರೆ ಮಂಡ್ಯ ಜ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ನತ್ತ ಮುಖ ಮಾಡುತ್ತಿದ್ದಾರೆ. ಸಚಿವ ನಾರಾಯಣಗೌಡ ಅವರು ಪಕ್ಷಾಂತರದ ಸುಳಿವು ನೀಡಿದ್ದು, ಈ ಮೂಲಕ ಅವರು ಕಾಂಗ್ರೆಸ್‍ಗೆ ಸೇರ್ಪಡೆಯಗುವುದು ಬಹುತೇಕ ಫಿಕ್ಸ್ ಆಗುವ ಸಾಧ್ಯತೆ ಇದೆ.

ಮಂಡ್ಯದ ಕೆ.ಆರ್.ಪೇಟೆ ಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ, ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ. ಆದರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುವುದು ಎಂದರು.
ಇನ್ನು ಕೆ.ಆರ್.ಪೇಟೆ ಕಾಂಗ್ರೆಸ್‍ನಲ್ಲಿ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ. ಯಾವುದೇ ನಿರ್ಧಾರ ತೆಗೆದುಕೊಂಡ್ರೂ ನಿಮಗೆ ತಿಳಿಸುತ್ತೇನೆ ಎಂದರು.

[t4b-ticker]

You May Also Like

More From Author

+ There are no comments

Add yours