ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ : ಈ ಬಾರಿ ಬಿ.ಎನ್.ಚಂದ್ರಪ್ಪನವರ ಗೆಲುವು ಅಭಾದಿತ : ಟಿ.ರಘುಮೂರ್ತಿ
ಚಳ್ಳಕೆರೆ: ಕಳೆದ ಸುಮಾರು ಹತ್ತು ತಿಂಗಳಿನಿಂದ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಐದು ಉತ್ತಮ ಗ್ಯಾರಂಟಿ ಜಾರಿಮಾಡುವ ಮೂಲಕ ಜನರ ಸಂಕಷ್ಟಗಳಿಗೆ ಸರ್ಕಾರ ನೆರವಾಗುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.
ಅವರು, ಶುಕ್ರವಾರ ಮೀರಸಾಬಿಹಳ್ಳಿ, ಬೆಳಗೆರೆ, ಸೋಮಗುದ್ದು, ಪರಶುರಾಮಪುರ, ಚೌಳೂರು, ದೇವರಮರಿಕುಂಟೆ, ಚನ್ನಮ್ಮನಾಗತಿಹಳ್ಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಗೆ ಮತಯಾಚನೆ ಮಾಡಿ ಮಾತನಾಡಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ೨೦೧೪ರಲ್ಲಿ ಸಂಸದರಾಗಿ ಆಯ್ಕೆಯಾಗಿ ೨೦೧೯ರಲ್ಲಿ ಸೋಲು ಅನುಭವಿಸಿ, ೨೦೨೪ರಲ್ಲಿ ನಿಮ್ಮೆಲ್ಲರ ಆಶೀರ್ವಾದವನ್ನು ಬಯಸಿ ಬಿ.ಎನ್.ಚಂದ್ರಪ್ಪ ಮತ್ತೊಮ್ಮೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ಧಾರೆ. ಈ ಬಾರಿ ಚುನಾವಣೆಯಲ್ಲಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವನ್ನು ಹೊಂದಿದ್ಧಾರೆ. ನೀವೆಲ್ಲರೂ ಬಿ.ಎನ್.ಚಂದ್ರಪ್ಪನವರಿಗೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಟಿ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಓ.ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜಿ.ಟಿ.ಶಶಿಧರ, ಮುಖಂಡ ಸಿ.ಜೆ.ಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.
[t4b-ticker]
+ There are no comments
Add yours