ಚಳ್ಳಕೆರೆ-13 ರಾಷ್ಟ್ರ ಪ್ರೇಮವನ್ನು ಹೆಚ್ಚಿಸುವ ಕೆಲಸ ಪ್ರತಿಯೊಬ್ಬರಲ್ಲೂ ಉಂಟು ಮಾಡುವ ಕಾರ್ಯ ಇಂದು ಚಳ್ಳಕೆರೆ ನಗರದಲ್ಲಿ ನಡೆದಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ಮುಖ್ಯರಸ್ತೆಗಳಲ್ಲಿ ನಡೆದ 1500 ಮೀಟರ್ ಉದ್ದದ ರಾಷ್ಟ್ರಧ್ವಜದ ಪ್ರದರ್ಶನ ಮತ್ತು ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲ್ಲೂಕು ಆಡಳಿತ, ಕಂದಾಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಆಯೋಜಿಸಿದ್ದ 1500 ಮೀಟರ್ ರಾಷ್ಟ್ರಧ್ವಜ ಹಿಡಿದು ಶಾಲಾ- ಕಾಲೇಜು ವಿದ್ಯಾರ್ಥಿಗಳೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಪ್ರದರ್ಶನ ಮತ್ತು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್. ರಘುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ , ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳ ಪ್ರಸನ್ನಕುಮಾರ್, ಸದಸ್ಯರಾದ ಕವಿತಾ ಬೋರಯ್ಯ, ಸುಜಾತ ಪ್ರಹ್ಲಾದ್, ಸಾವಿತ್ರಮ್ಮ, ರಾಘವೇಂದ್ರ, ರಮೇಶಗೌಡ, ರೈತ ಸಂಘದ ಸೋಮಗುದ್ದು ರಂಗಸ್ವಾಮಿ, ವಿಶ್ವಕರ್ಮ ರಾಜ್ಯ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್ ಮತ್ತು ಮುಖಂಡ ಕಾರ್ಯಕರ್ತರು ಸಾರ್ವಜನಿಕರು ಚಳ್ಳಕೆರೆ ನಗರದ ಶಾಲಾ ಮತ್ತು ಕಾಲೇಜು ಶಿಕ್ಷಕರುಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.
+ There are no comments
Add yours