ತೆಲಂಗಾಣದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ಪ್ರಚಾರ

 

ಚಳ್ಳಕೆರೆ: ಕಳೆದ ಆರು ತಿಂಗಳಿನಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಮುಖ್ಯಮಂತ್ರಿ  ಸಿದ್ದರಾಮಯ್ಯ (Siddaramaiah ) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖಂಡತ್ವದಲ್ಲಿರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವ ಮೂಲಕ ಕರ್ನಾಟಕ ರಾಜ್ಯ ಎಲ್ಲರಿಗೂ ಮಾದರಿಯಾಗಿದೆ. ವಿಶೇಷವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ಆರ್ಥಿಕ ನೆರವು, ಉಚಿತ ವಿದ್ಯುತ್ ಹಾಗೂ ಪಡಿತರ ವಿತರಣೆಯಲ್ಲಿ ಮಾದರಿಯಾಗಿದ್ದು, ತೆಲಂಗಾಣದ ಜನತೆಯೂ ಸಹ ಈ ಸೌಲಭ್ಯವನ್ನು ಪಡೆಯಬೇಕಾದಲ್ಲಿ ಅಭ್ಯರ್ಥಿ ಡಾ.ಎಸ್.ಎ.ಸಂಪತ್‌ಕುಮಾರ್‌ಗೆ ಮತ ನೀಡಬೇಕೆಂದು ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತೆಲಂಗಾಣದ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಅವರು, ತೆಲಂಗಾಣದ ಅಲಂಪುರ ಮೀಸಲು ವಿಧಾನಸಭಾ ಕ್ಷೇತ್ರದ ಪೆದ್ದಗನವಾಡ ಗ್ರಾಮದಲ್ಲಿ ಅಭ್ಯರ್ಥಿ ಡಾ.ಎಸ್.ಎನ್.ಸಂಪತ್‌ಕುಮಾರ್ ಪರ ತೆಲಗುಭಾಷೆಯಲ್ಲೇ ಮತಯಾಚನೆ ಮಾಡಿದರು. ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಶಾಸಕ ಟಿ.ರಘುಮೂರ್ತಿಯವರಿಗೆ ಆಲಂಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನೇಮಿಸಿದ್ದು, ಅವರು ಈಗಾಗಲೇ ಚುನಾವಣ ಕಣಕ್ಕೆ ಇಳಿದು ಅಭ್ಯರ್ಥಿಯ ಗೆಲುವಿಗಾಗಿ ಪ್ರಯತ್ನ ಮುಂದುವರೆಸಿದ್ಧಾರೆ.
ಅಭ್ಯರ್ಥಿ ಡಾ.ಎಸ್.ಎನ್.ಸಂಪತ್‌ಕುಮಾರ್ ಮಾತನಾಡಿ, ಕರ್ನಾಟಕದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಟಿ.ರಘುಮೂರ್ತಿ ಮೂರನೇ ಬಾರಿಗೆ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧನೆ ಮಾಡಿದ್ಧಾರೆ. ಕಾಂಗ್ರೆಸ್ ಪಕ್ಷದ ಹಲವಾರು ಕೊಡುಗೆಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ಧಾರೆ. ಬಡ ಜನರ ಅಭಿವೃದ್ದಿ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಆದ್ದರಿಂದ ತಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ನನ್ನ ಗೆಲುವಿಗೆ ನಿರಂತರ ಶ್ರಮಿಸುತ್ತಿರುವ ಶಾಸಕ ಟಿ.ರಘುಮೂರ್ತಿಯವರಿಗೆ ಈ ಭಾಗದ ಮತದಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
————————————————

[t4b-ticker]

You May Also Like

More From Author

+ There are no comments

Add yours