ಬೆಳೆ ಪರಿಹಾರ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಲು ಮನವಿ : ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡದೆ, ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದು, ಈ ಬಗ್ಗೆ ಕೆಲವೇ ಕೆಲವು ಪ್ರಕರಣಗಳಲ್ಲಿ ಕ್ರಮ ಆಗಿದೆ. ಆದರೆ ಜಿಲ್ಲೆಯಾದ್ಯಂತ ಇಂತಹ ಪ್ರಕರಣಗಳು ನಡೆದಿರುವ ಸಾಧ್ಯತೆಗಳಿದ್ದು, ಬೆಳೆ ಪರಿಹಾರದ ಜೊತೆಗೆ ಬೆಳೆ ವಿಮೆ ಪರಿಹಾರದ ಮೊತ್ತ ಪಾವತಿಯ ಹಣ ದುರ್ಬಳಕೆ ಬಗ್ಗೆ ಸಮಗ್ರ ತನಿಖೆಗೆ ಸಮಿತಿ ರಚಿಸುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪ್ರತಿಕ್ರಿಯಿಸಿ, ಈಗಾಗಲೆ ದೂರುಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.
[t4b-ticker]
+ There are no comments
Add yours