ಚಳ್ಳಕೆರೆ-೨೭ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಶಾಸಕ ಭವನ ಕಾರ್ಯಾಲಯ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೂ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಆದರ್ಶ ಕೇಂದ್ರವಾಗಿದೆ ಎಂದು ಸಿರಿಗೆರೆ ತರಳಬಾಳು ಬೃಹ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.
ಅವರು, ಇಲ್ಲಿನ ಶಿಕ್ಷಣ ಇಲಾಖೆ ಕಾರ್ಯಕ್ರಮ ಆಗಮಿಸಿದ ಸಂದರ್ಭದಲ್ಲಿ ಶಾಸಕರ ಭವನಕ್ಕೆ ಭೇಟಿ ನೀಡಿ ಅಲ್ಲಿ ನಿರ್ಗಮನ ರಾಷ್ಟçಪತಿಗಳು, ಪ್ರಧಾನಮಂತ್ರಿಗಳು, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳ ಭಾವಚಿತ್ರಗಳನ್ನು ವೀಕ್ಷಿಸಿದರಲ್ಲದೆ, ಪಕ್ಷಬೇದವಿಲ್ಲದೆ ಶಾಸಕ ಟಿ.ರಘುಮೂರ್ತಿಯವರು ಎಲ್ಲಾ ಪ್ರಭಾವಿ ಮುಖಂಡ ಭಾವಚಿತ್ರಗಳನ್ನು ಶೇಖರಿಸಿದ್ದಾರೆ. ಅವರು ಮಾಡಿದ ಸಾಧನೆಯ ಬಗ್ಗೆಯೂ ಸಹ ಸಂಪೂರ್ಣ ಮಾಹಿತಿ ನೀಡಿದ್ದಾರೆ. ರಾಜ್ಯದ ಬೇರೆ ಯಾವುದೇ ವಿಧಾನಸಭಾ ಕ್ಷೇತ್ರದಲ್ಲೂ ಸಹ ಇಂತಹ ದೃಶ್ಯವನ್ನು ಕಾಣಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಪ್ರಸ್ತುತ ಸಮಾಜದಲ್ಲಿ ಯಾವ ರೀತಿ ಬದಲಾವಣೆಯಾಗುತ್ತಿದೆ ಎಂಬ ಬಗ್ಗೆ ಇಲ್ಲಿಗೆ ಬಂದು ತಿಳಿಯಬಹುದು. ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳ ಚಿತ್ರವನ್ನು ಸಹ ನಾವು ಇಲ್ಲಿ ಕಾಣಬಹುದು. ಇದೊಂದು ಅಪರೂಪದ ಕಾರ್ಯಾಲಯವಾಗಿದೆ ಎಂದರು.
ಶಿಕ್ಷಣ ಸಚಿವ ಮಧುಬಂಗಾರಪ್ಪ ಸಹ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿ, ಶಾಸಕ ಭವನದಲ್ಲಿ ಶಾಸಕರು ವಿಶೇಷ ಗಮನಹರಿಸಿ ಹಲವಾರು ಸುಧಾರಣೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರಿ ಯೋಜನೆಗಳ ಬಗ್ಗೆ ಇಲ್ಲಿ ಮಾರ್ಗದರ್ಶನ ನೀಡಲಾಗುತ್ತಿದೆ. ಸಮಸ್ಯೆಗಳನ್ನು ಹೊತ್ತುತರುವ ಸಾರ್ವಜನಿಕರಿಗೆ ಅಷ್ಟೇ ವೇಗದಲ್ಲಿ ಪರಿಹಾರವನ್ನು ರೂಪಿಸುವಲ್ಲಿ ಶಾಸಕ ಯಶಸ್ವಿಯಾಗಿದ್ಧಾರೆಂದರು. ಶಾಸಕ ಟಿ.ರಘುಮೂರ್ತಿ ಮತ್ತು ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.
[t4b-ticker]
+ There are no comments
Add yours