ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

 

ಹಾಸನ: ಈಗಾಗಲೇ ರಾಜ್ಯ ರಾಜಕೀಯ, ದೇಶದ ರಾಜಕೀಯ ಚಟುವಟಿಕೆ ಸೇರಿದಂತೆ ವಿವಿಧ ವಿಚಾರವಾಗಿ ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದರು. ಈಗ ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಅದೇ ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಿದೆ ಎಂಬುದಾಗಿದೆ.

ಓದಲೇ ಬೇಕಾದ ಸುದ್ದಿ: ವಿವಾಹ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದ ದಂಪತಿಗಳು ಕೂಡಿ ಬಾಳೋಣ ಅಂತ ಜೊತೆಯಾಗಿದ್ದು ಹೇಗೆ, ಓದಿ ಈ ಸ್ಟೋರಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, ಈ ವರ್ಷವೂ ಮಳೆಗೂ ತೊಂದರೆ ಇಲ್ಲ. ಅನ್ನಕ್ಕೂ ಕೊರತೆಯಿಲ್ಲ. ದೇಶ, ರಾಜ್ಯದಲ್ಲಿ ವಿಪರೀತ ಮಳೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮಳೆಗೆ ಯಾವುದೇ ತೊಂದರೆ ಇಲ್ಲ. ಮೊನ್ನೆ ಬಂದ ರೀತಿಯೇ ಇನ್ನೂ ಭಾರೀ ಮಳೆ ಬರಲಿದೆ. ಗುಡುಗು ಸಹಿತ ಮಳೆಯಿಂದ ಅಪಮೃತ್ಯು ಉಂಟಾಗಲಿದೆ. ಪ್ರಕೃತಿಯಿಂದಲೂ ಬಹಳ ಹಾನಿಯಾಗಲಿದೆ ಎಂದು ಹೇಳಿದ್ದಾರೆ.

ಓದಿ: ಸೌಲಭ್ಯಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಇಂದೇ ಅರ್ಜಿ ಹಾಕಿ

ಇನ್ನೂ ರಾಜ್ಯ ಸರ್ಕಾರದ ಕುರಿತಂತೆ ಮಾತನಾಡಿದಂತ ಅವರು, ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ. ಆದರೇ ಏನೂ ಆಗೋದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ. ಆನಂದ ಪಡುವವರಿಲ್ಲ. ಜೊತೆಗೆ ರಾಜ್ಯ ಸರ್ಕಾರಕ್ಕೆ ಏನೂ ತೊಂದರೆ ಆಗೋದಿಲ್ಲ. ಇದನ್ನು ಬಿಟ್ಟು ನಾನು ಏನೂ ಹೇಳಲ್ಲ. ನನಗೆ ಎಲ್ಲರೂ ಬೇಕಾಗಿರೋರು ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours