ಚಿತ್ರದುರ್ಗ:31: ತಾಲೂಕಿನ ತುರುವನೂರು ನಾಡ ಕಚೇರಿಯಲ್ಲಿ ನೂತನವಾಗಿ ಅಳವಡಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಉಪವಿಭಾಗಾಧಿಕಾರಿ ಚಂದ್ರಯ್ಯ ಮತ್ತು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಮಾತನಾಡಿ ತುರುವನೂರು ನಾಡ ಕಚೇರಿಯಲ್ಲಿ ಸಾವಿರಾರು ನಾಗರಿಕರಿಗೆ ಶುದ್ದವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅನೇಕ ಜನರು ನೀರಿಗಾಗಿ ಪರಿತಪಿಸಬಾರದು ಎಂಬ ಉದ್ದೇಶದಿಂದ ಶುದ್ದ ನೀರಿನ ಘಟಕ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಾಗರಿಕರು ಹಾಜರಿದ್ದರು.
[t4b-ticker]
+ There are no comments
Add yours