ತುರುವನೂರು ನಾಡ ಕಚೇರಿಯಲ್ಲಿ ನೂತನ ಶುದ್ದ ನೀರಿನ ಘಟಕ ಉದ್ಘಾಟನೆ

 

ಚಿತ್ರದುರ್ಗ:31:  ತಾಲೂಕಿನ ತುರುವನೂರು ನಾಡ ಕಚೇರಿಯಲ್ಲಿ ನೂತನವಾಗಿ ಅಳವಡಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು  ಉಪವಿಭಾಗಾಧಿಕಾರಿ ಚಂದ್ರಯ್ಯ ಮತ್ತು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಮಾತನಾಡಿ ತುರುವನೂರು ನಾಡ ಕಚೇರಿಯಲ್ಲಿ ಸಾವಿರಾರು ನಾಗರಿಕರಿಗೆ ಶುದ್ದವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ.  ಅನೇಕ ಜನರು ನೀರಿಗಾಗಿ ಪರಿತಪಿಸಬಾರದು ಎಂಬ ಉದ್ದೇಶದಿಂದ ಶುದ್ದ ನೀರಿನ ಘಟಕ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಈ‌ ಸಂದರ್ಭದಲ್ಲಿ  ನಾಗರಿಕರು  ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours