ನೂತನ ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದ ದಾರಿ ಹೇಗಿದೆ ನೀವು ಓದಿ..

 

2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದ ನಂತರ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ ನಾಯಕ ಸಿದ್ದರಾಮಯ್ಯ. ಬೆಂಗಳೂರು: 2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದ ನಂತರ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ ನಾಯಕ ಸಿದ್ದರಾಮಯ್ಯ.(Siddaramaiah Karnataka CM) 2013ರ ಮೇ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿದ್ದರಾಮಯ್ಯನವರು ಇದೀಗ ಸರಿಯಾಗಿ ದಶಕದ ನಂತರ ಮತ್ತೊಮ್ಮೆ ಎರಡನೇ ಬಾರಿಗೆ 2023ರಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅದೇ ಸ್ಥಳದಲ್ಲಿ ಅಧಿಕಾರದ ಗದ್ದುಗೆ ಏರಲು ಹೊರಟಿದ್ದಾರೆ.

ಸಿದ್ದರಾಮಯ್ಯನವರಿಗೆ ಸಿಎಂ ಪಟ್ಟ ಒಲಿಯಲು ಕಾರಣ: ಎರಡನೇ ಬಾರಿ ಮುಖ್ಯಮಂತ್ರಿಯಾಗಬೇಕೆಂದು ಕನಸು, ಆಸೆ ಪಟ್ಟ ಸಿದ್ದರಾಮಯ್ಯನವರಿಗೆ ಈ ಬಾರಿ ಅಡ್ಡಬಂದಿದ್ದು ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದು ಹೆಸರು ಪಡೆದ ಡಿ ಕೆ ಶಿವಕುಮಾರ್. ಹೀಗಾಗಿ ಈ ಬಾರಿ 135 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದರೂ ಫಲಿತಾಂಶ ಬಂದು ಸಿಎಂ ಆಯ್ಕೆ ಮಾಡಲು ಹೈಕಮಾಂಡ್ ಗೆ 5 ದಿನಗಳು ಹಿಡಿಯಿತು. ಕೊನೆಗೂ ಸಿಎಂ ಗಾದಿ ಹಗ್ಗಜಗ್ಗಾಟದಲ್ಲಿ ಸಿದ್ದರಾಮಯ್ಯನವರದ್ದೇ ಕೈ ಮೇಲಾಯಿತು. ಹಾಗಾದರೆ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಪ್ರಾಶಸ್ತ್ಯ ನೀಡಲು ಕಾರಣವೇನು ಎಂದು ನೋಡಿದಾಗ: -ಕರ್ನಾಟಕ ರಾಜಕೀಯದಲ್ಲಿ ಸಿದ್ದರಾಮಯ್ಯ ಜನಪ್ರಿಯ ನಾಯಕ -ಬಡವರ ಪರ ಕಾಳಜಿ, ದೀನದಲಿತರ ಪರ ನಾಯಕ ಎಂದು ಸಿದ್ದರಾಮಯ್ಯ ಜನಪ್ರಿಯ.

ಕಾಂಗ್ರೆಸ್ ನ ಬಹುತೇಕ ಶಾಸಕರ ಬೆಂಬಲ -ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಬೆಂಬಲ ಸಿಎಂ ಮತ್ತು ಡಿಸಿಎಂ ಆಯ್ಕೆ ಕಗ್ಗಂಟು ಕೊನೆಗೂ ಬಗೆಹರಿದಿದೆ. ಆದರೆ ಇನ್ನು ಮುಂದೆ ಸಮನ್ವಯದಿಂದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕೆಲಸ ಮಾಡಿಕೊಂಡು ಹೋಗುತ್ತಾರೆಯೇ, ಇನ್ನು ಎರಡೂವರೆ ವರ್ಷ ಕಳೆದ ನಂತರ ಸಿದ್ದರಾಮಯ್ಯನವರು ಸಂತೋಷದಿಂದ ಯಾವುದೇ ಸಮಸ್ಯೆ, ವಿವಾದಗಳಿಲ್ಲದೆ ಸಿಎಂ ಪಟ್ಟವನ್ನು ಡಿ ಕೆ ಶಿವಕುಮಾರ್ ಗೆ ಬಿಟ್ಟುಕೊಡುತ್ತಾರೆಯೇ ಎಂಬುದು ಸದ್ಯದ ಸಂದೇಹ. ಸಿದ್ದರಾಮಯ್ಯನವರ ರಾಜಕೀಯ ಪಯಣದ ಸಂಕ್ಷಿಪ್ತ ನೋಟ: 1947ರ ಆಗಸ್ಟ್ 3ರಂದು ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಹಿಂದುಳಿದ ಕುರುಬ ಜನಾಂಗದಲ್ಲಿ ಜನನ. ವಿದ್ಯಾಭ್ಯಾಸ: ಬಿ.ಎಸ್ಸಿ, ಎಲ್ ಎಲ್ ಬಿ ಪದವಿ ಆರಂಭ ರಾಜಕೀಯ: ಸಮಾಜವಾದ ತತ್ವ, ಸಿದ್ಧಾಂತಗಳ ಮೇಲೆ ಒಲವು, ರಾಮ್ ಮನೋಹರ್ ಲೋಹಿಯಾ ಅವರ ತತ್ವಗಳಿಂದ ಪ್ರಭಾವ.

ಶಾಲಾ ದಿನಗಳಿಂದಲೇ ಉತ್ತಮ ವಾಗ್ಮಿ ಎಂದು ಹೆಸರು. ಶಾಸಕರಾಗಿ 4 ದಶಕಗಳ ಅನುಭವ: ಭಾರತೀಯ ಲೋಕ ದಳದಿಂದ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕರ್ನಾಟಕ ವಿಧಾನಸಭೆಗೆ 1983ರಲ್ಲಿ ಪ್ರವೇಶ. ನಂತರ ಅಂದಿನ ಆಡಳಿತಾರೂಢ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿ(ನಂತರ ಜನತಾ ದಳ) ಸಮಾಜದ ದುರ್ಬಲ ವರ್ಗದ ನಾಯಕನಾಗಿ ಗುರುತಿಸುವಿಕೆ. ಚಾಮುಂಡೇಶ್ವರಿ ಕ್ಷೇತ್ರದಿಂದ 183ರಿಂದ 1989, 1994ರಿಂದ 1999, 2004ರಿಂದ 2007ರವರೆಗೆ ಶಾಸಕರಾಗಿ ಆಯ್ಕೆ.

ನಂತರ ಚಾಮುಂಡೇಶ್ವರಿ ತೊರೆದು ವರುಣಾ ಕ್ಷೇತ್ರದಿಂದ ಸ್ಪರ್ಧೆ(2008ರಿಂದ 2018ರವರೆಗೆ) 2018ರಲ್ಲಿ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆ, 2023ರಲ್ಲಿ ಮತ್ತೆ ವರುಣಾದಲ್ಲಿ ಸ್ಪರ್ಧಿಸಿ ಗೆದ್ದು ಸಿಎಂ ಆಗಿ ಆಯ್ಕೆ. ಮಾಜಿ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೆಚ್ ಡಿ ದೇವೇಗೌಡರ ಗರಡಿಯಲ್ಲಿ ಪಳಗಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಳ್ಳುವಿಕೆ. ಆದರೆ ಜೆಡಿಎಸ್ ನಲ್ಲಿ ಆಗ ದೇವೇಗೌಡರ ಪುತ್ರ ಹೆಚ್ ಡಿ ಕುಮಾರಸ್ವಾಮಿಯವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ, ದೇವೇಗೌಡರು ತಮ್ಮ ಪುತ್ರನನ್ನು ಬೆಳೆಸುತ್ತಿದ್ದಾರೆ ಎಂದು ಮನಗಂಡು ಬಂಡಾಯ. ಜೆಡಿಎಸ್ ನಿಂದ ಹೊರನಡೆದು ರಾಜ್ಯದಲ್ಲಿ ಅಹಿಂದ ಚಳವಳಿ ಪ್ರಾರಂಭ.

2006ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ. ಅಹಿಂದ ನಾಯಕ: ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರನ್ನೊಳಗೊಂಡ ಗುಂಪು, ಅದರ ಸಂಕ್ಷಿಪ್ತ ರೂಪವೇ ಅಹಿಂದ. ಈ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕೀಯ ತಂತ್ರಗಾರಿಕೆ ತೋರಿಸಿ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ವಿಶ್ವಾಸ ಗಳಿಸಿ ಅಭಿವೃದ್ಧಿ ಕಂಡ ನಾಯಕ ಸಿದ್ದರಾಮಯ್ಯ. 1970ರ ದಶಕದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಅವರಂತೆ ಜನಪ್ರಿಯತೆ, ಇಮೇಜ್ ಪಡೆದುಕೊಂಡ ಮತ್ತೊಬ್ಬ ರಾಜಕಾರಣಿ ಸಿದ್ದರಾಮಯ್ಯ. ಕರ್ನಾಟಕದ ಎರಡು ಜನಪ್ರಿಯ, ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ನಾಯಕರ ಎದುರು ರಾಜಕೀಯ ಪ್ರಭಾವ ಮೆರೆದ ಹಿಂದುಳಿದ ವರ್ಗದ ನಾಯಕರೆಂದರೆ ಸಿದ್ದರಾಮಯ್ಯ.

[t4b-ticker]

You May Also Like

More From Author

+ There are no comments

Add yours